ಮುಡಾ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದರರ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಇ.ಡಿಯನ್ನು ಆಗ್ರಹಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ” ಎಂದಿದ್ದಾರೆ.
“ಇ.ಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ” ಎಂದು ಅಶೋಕ್ ಹೇಳಿದ್ದಾರೆ.
ಮೂರು ಮುಚ್ಚಿಕೋಂಡಿರೋ ಕೇನೋ ನಿನಗೆ,