ವಿಜಯಪುರ | ಜಾತಿಗಣತಿ ವರದಿ ಬಿಡುಗಡೆಗೆ ಮಾಜಿ ಶಾಸಕ ರಾಜು ಆಲಗೂರ ಆಗ್ರಹ

Date:

Advertisements

ಜಾತಿಗಣತಿ ವರದಿಯನ್ನು ಸಂಪುಟ ಸಮಿತಿ ಮುಂದಿರಿಸಿ ಆದಷ್ಟು ಬೇಗ ಬಿಡುಗಡೆಗೊಳಿಸಬೇಕು. ಇಲ್ಲದಿದ್ದಲಿ ರಾಜ್ಯಾದ್ಯಂತ ಆಂದೋಲನ ಆರಂಭಿಸಲಾಗುವುದು ಎಂದು ಕಾಂಗ್ರೆಸ್‌ ಮಾಜಿ ಶಾಸಕ ರಾಜು ಆಲಗೂರ ಆಗ್ರಹಿಸಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದಲ್ಲಿರುವ ಎಲ್ಲ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಅರಿಯಲು ಹಿಂದಿನ ಸಿದ್ದರಾಮಯ್ಯ ಸರ್ಕಾರ ಜಾತಿಗಣತಿ ನಡೆಸಿತ್ತು. ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಜಾತಿಗಣತಿ ವರದಿ ಬಿಡುಗಡೆಯಾಗಲಿಲ್ಲ. ಇದೀಗ ನಮ್ಮದೇ ಸರ್ಕಾರವಿದ್ದು, ತ್ವರಿತವಾಗಿ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

“ಬೆರಳೆಣಿಕೆ ಸಮುದಾಯಗಳು ಎಲ್ಲ ರೀತಿಯ ಅನುಕೂಲತೆ ಪಡೆದಿವೆ. ಬಹುಸಂಖ್ಯಾತ ಹಿಂದುಳಿದ, ಅಲ್ಪಸಂಖ್ಯಾತ ಜನರಿಗೆ ಬಹಳ ಕಡಿಮೆ ಅವಕಾಶಗಳು ಸಿಕ್ಕಿವೆ. ಹಾಗಾಗಿ ಮಂಡನೆಯಾಗಿರುವ ವರದಿಯನ್ನು ಈಗಲಾದರೂ ಬೇಗ ಅನುಷ್ಟಾನಗೊಳಿಸಬೇಕು” ಎಂದು ಆಗ್ರಹಿಸಿದರು.

Advertisements

“ಎಲ್ಲೋ ಒಂದು ಕಡೆ ಸಿದ್ದರಾಮಯ್ಯನಂಥವರು ಅವಕಾಶ ಪಡೆದಿರಬಹುದು. ಆದರೆ ಇನ್ನುಳಿದವರಿಗೆ ಆ ಅವಕಾಶ ಸಿಕ್ಕಿಲ್ಲ. ಆ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಅವಕಾಶಗಳು ಸಿಗಬೇಕಿದೆ. ಈ ಕೂಗು ಎಲ್ಲ ಪ್ರಗತಿಪರ ಸಂಘಟನೆಗಳಿಂದ ಕೇಳಿಬಂದಿದೆ. ಹೀಗಾಗಿ ಆದಷ್ಟು ಬೇಗ ವರದಿ ಅನುಷ್ಠಾನಕ್ಕೆ ಬರಲಿದೆಯೆಂದು ಸಿದ್ದರಾಮಯ್ಯನವರ ಮೇಲೆ ನಂಬಿಕೆ ಮತ್ತು ಭರವಸೆಯಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಜಾತಿಗಣತಿ ಬಿಡುಗಡೆ ಮಾಡಬಾರದೆಂದು ಅನೇಕರು ವಿರೋಧ ಮಾಡುತ್ತಿದ್ದಾರೆ. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ ಸಮುದಾಯಗಳ ಸಮೀಕ್ಷೆಯಾಗಿದೆ. ಆ ಬಗ್ಗೆಯೂ ಈ ವರದಿಯಲ್ಲಿದೆಯೆಂದು ಭಾವಿಸಿದ್ದೇನೆ. ಬಿಡುಗಡೆಯಾದರೆ ಆ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮಹರ್ಷಿ ವಾಲ್ಮೀಕಿ ಜಯಂತಿ

ಮುಖಂಡ ಚಂದ್ರಶೇಖರ ಕೊಡಬಾಗಿ ಮಾತನಾಡಿ, “ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದವರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಾತಿಗಣತಿಯ ಅವಶ್ಯಕತೆಯಿದೆ. ಅನೇಕ ಜಾತಿಗಳು ರಾಜಕೀಯವಾಗಿ ಗುರುತಿಸಿಕೊಳ್ಳಲಾಗಿಲ್ಲ. ಹೀಗಾಗಿ ಸರ್ವರಿಗೂ ಅವಕಾಶ ಸಿಗಬೇಕಾದರೆ ಜಾತಿಗಣತಿ ವರದಿ ಬಿಡುಗಡೆಯಾಗಬೇಕು. ಸಿಎಂ ಸಿದ್ದರಾಮಯ್ಯನವರು ಯಾವುದೇ ಒತ್ತಡಕ್ಕೆ ಮಣಿಯದೆ ವರದಿ ಜಾರಿಗೆ ತರುವ ವಿಶ್ವಾಸವಿದೆ. ಆಕಸ್ಮಿಕವಾಗಿ ಚರ್ಚೆಯಾಗದೇ ಹೋದರೆ ರಾಜ್ಯದಲ್ಲಿ ಆಂದೋಲನ ಆರಂಭಗೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದರು.

ಡಾ ಗಂಗಾಧರ ಸಂಬಣ್ಣಿ, ಸುರೇಶ ಪೊಣಸಗಿ, ಚಂದ್ರಶೇಖರ ಕೊಡಬಾಗಿ, ಮಹ್ಮದ್ ರಫೀಲ್ ಟಪಾಲ್, ಸಾಹೇಬಗೌಡ ಬಿರಾದಾರ, ಕೃಷ್ಣಾ ಅಣಚಿ, ವಸಂತ ಹೊನಮೊಡೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X