ಮತ ಎಣಿಕೆ ಆರಂಭ: ಅಂಚೆ ಮತ ಎಣಿಕೆ; ಕಳೆಗಟ್ಟಿದ ಮತಕೇಂದ್ರ ಆವರಣ

Date:

Advertisements
  • ಸಮಯಕ್ಕೆ ಸರಿಯಾಗಿ ಕಾರ್ಯಾರಂಭ ಮಾಡಿದ ಕೌಂಟಿಂಗ್‌ ಬೂತ್‌
  • ರಾಜ್ಯಾದ್ಯಂತ ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್‌

ರಾಜ್ಯ ರಾಜಕೀಯದ ಭವಿಷ್ಯ ಬದಲಿಸುವ ವಿಧಾನಸಭಾ ಚುನಾವಣೆ 2023ರ ಮತ ಎಣಿಕಾ ಕಾರ್ಯ ಆರಂಭಗೊಂಡಿದೆ.

ಮುಂಜಾನೆ ಎಂಟಕ್ಕೆ ಪೊಲೀಸ್‌ ಬಿಗಿ ಭದ್ರತೆ ಜೊತೆಗೆ ತೆರೆದುಕೊಂಡ ಮತ ಎಣಿಕಾ ಕೇಂದ್ರಗಳಲ್ಲಿ ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಇದಾದ ಬಳಿಕ ಇವಿಎಂ ಮತ ಎಣಿಕೆ ಮಾಡಲಾಗುತ್ತದೆ.

ಮತ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಮತ್ತೊಂದೆಡೆ ಎಣಿಕಾ ಕೇಂದ್ರದ ಸುತ್ತಲೂ ವಿವಿಧ ಪಕ್ಷಗಳ ಕಾರ್ಯಕರ್ತರು ನೆರೆದಿದ್ದು, ತಮ್ಮ ನೆಚ್ಚಿನ ನಾಯಕರ ಭವಿಷ್ಯ ನಿರ್ಧಾರಕ್ಕೆ ಕಾದು ಕುಳಿತಿದ್ದಾರೆ.

Advertisements

ಕಣದಲ್ಲಿರುವ ವಿವಿಧ ಪಕ್ಷಗಳ 2615 ಅಭ್ಯರ್ಥಿಗಳಲ್ಲಿ ಎಷ್ಟು ಮಂದಿ ವಿಧಾನಸಭೆ ಪ್ರವೇಶಿಸಲಿದ್ದಾರೆ ಎನ್ನುವ ಕುತೂಹಲಕ್ಕೆ ಮಧ್ಯಾಹ್ನ ವೇಳೆಗೆ ಉತ್ತರ ಸಿಗುವ ನಿರೀಕ್ಷೆ ಇದೆ.

ಅಂಚೆ ಮತ ಎಣಿಕೆ ಕಾರ್ಯದಲ್ಲಿ ಬೆಂಗಳೂರನ್ನೂ ಒಳಗೊಂಡಂತೆ ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಬಿಜೆಪಿ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಮುನ್ನಡೆ ಕಾಯ್ದುಕೊಂಡಿರುವುದು ಕುತೂಹಲ ಹೆಚ್ಚಿಸಿದೆ.

ಕೌಂಟಿಂಗ್

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X