IND v/s NZ | 462 ರನ್‌ಗೆ ಟೀಮ್-ಇಂಡಿಯಾ ಆಲ್‌ಔಟ್; ನ್ಯೂಜಿಲೆಂಡ್‌ ಗೆಲ್ಲಲು ಬೇಕಿದೆ 107 ರನ್‌

Date:

Advertisements

ಇಂಡಿಯಾ ಮತ್ತು ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡಗಳ ನಡುವೆ ಟೆಸ್ಟ್‌ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್‌ ಕ್ರಿಕೆಟ್‌ ನಡೆಯುತ್ತಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 462 ರನ್‌ಗಳಿಸಿ, ಆಲ್‌ಔಟ್‌ ಆಗಿದೆ. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಗೆಲ್ಲಲು 107 ರನ್‌ಗಳನ್ನು ಕಲೆ ಹಾಕಬೇಕಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್‌ಗಳಿಸಿದ್ದ ಟೀಮ್ ಇಂಡಿಯಾ ಆಲ್‌ಔಟ್‌ ಆಗಿತ್ತು. ಬಳಿಕ ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ತಂಡ ಬರೋಬ್ಬರಿ 402 ರನ್‌ಗಳನ್ನು ಕಲೆಹಾಕಿತ್ತು.

ನ್ಯೂಜಿಲೆಂಡ್‌ ಭರ್ಜರಿ ರನ್‌ ಗಳಿಸಿದ್ದರಿಂದ, ಭಾರತ ತಂಡ 356 ರನ್‌ಗಳ ಹಿನ್ನಡೆ ಅನುಭವಿಸಿತ್ತು. ಇದೀಗ, ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಟೀಮ್‌-ಇಂಡಿಯಾ 462 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದೆ.

Advertisements

ಎರಡನೇ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಖಾನ್ (150), ರಿಷಭ್ ಪಂತ್ (99), ವಿರಾಟ್ ಕೊಹ್ಲಿ (70) ಹಾಗೂ ನಾಯಕ ರೋಹಿತ್ ಶರ್ಮಾ (52) ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ನಾಲ್ವರ ಉತ್ತಮ ಆಟದೊಂದಿಗೆ 99.3 ಓವರ್‌ಗಳಲ್ಲಿ ಭಾರತ ತಂಡ 462 ರನ್ ಗಳಿಸಿ, ಆಲ್‌ಔಟ್‌ ಆಗಿದೆ.

ಮೊದಲ ಮತ್ತು ಎರಡನೇ ಇನ್ನಿಂಗ್‌ನಲ್ಲಿ ಟೀಮ್ ಇಂಡಿಯಾ, 508 (462+46) ರನ್‌ ಕಲೆ ಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್‌ನಲ್ಲಿ 402 ರನ್‌ ಗಳಿಸಿರುವ ನ್ಯೂಜಿಲೆಂಡ್‌, ಮೊದಲ ಟೆಸ್ಟ್‌ ಗೆಲ್ಲಲು 107 ರನ್‌ಗಳ ಅಗತ್ಯವಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸರ್ಫರಾಜ್ ಖಾನ್ ಅವರು ತಮ್ಮ ಮೊದಲ ಶತಕ ಬಾರಿಸಿದ್ದಾರೆ. ಅವರು 195 ಎಸೆತಗಳಿಗೆ 150 ರನ್‌ಗಳಿಸಿದ್ದಾರೆ. ಇನ್ನು, ರಿಷಬ್ ಪಂತ್ ಅವರು 99 ರನ್‌ಗಳಿಸಿ, ಔಟಾಗಿದ್ದು, ಶತಕ ವಂಚಿತರಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X