ಶಿವಮೊಗ್ಗ ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

Date:

Advertisements

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಸ್ಥಾನಗಳಿಗೆ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಜಿಲ್ಲೆಯ 15 ಗ್ರಾಮ ಪಂಚಾಯಿತಿಯ 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 531 ಗ್ರಾಮ ಪಂಚಾಯಿತಿಗಳ 641 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಉಪಚುನಾವಣೆಗೆ ನವೆಂಬರ್‌ 6ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದಾರೆ. ನವೆಂಬರ್‌ 12ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ನವೆಂಬರ್‌ 15 ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನ.23ರಂದು ಮತದಾನ ನಡೆಯಲಿದ್ದು, ನ.26ರಂದು ಮತ ಎಣಿಕೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಡಾ ಮಂತರ್ ಗೌಡ

Advertisements

ಶಿವಮೊಗ್ಗ ತಾಲೂಕಿನ ಕೋಟೆಗಂಗೂರು, ಸಾಗರದ ಕುದರೂರು, ಭದ್ರಾವತಿಯ ಬಾರಂದೂರು, ಅರಕೆರೆ, ತೀರ್ಥಹಳ್ಳಿಯ ತೀರ್ಥಮತ್ತೂರು, ಹೊಸನಗರದ ಎಂ ಗುಡ್ಡೆಕೊಪ್ಪ, ಶಿಕಾರಿಪುರದ ಮಾರವಳ್ಳಿ, ಹಿತ್ತಲ, ಸುಣ್ಣದಕೊಪ್ಪ, ತರಲಘಟ್ಟ, ಸೊರಬ ತಾಲೂಕಿನ ಹೊಸಬಾಳೆ, ಜಡೆ, ಭಾರಂಗಿ ಗ್ರಾಮ ಪಂಚಾಯಿತಿಗಳ ತಲಾ ಒಂದು ಸ್ಥಾನ, ಭದ್ರಾವತಿಯ ಮೈದೊಳಲು, ಅರಹತೊಳಲು ಗ್ರಾಮ ಪಂಚಾಯಿತಿಗಳ ತಲಾ ಮೂರು ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X