ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

Date:

Advertisements
  • ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ
  • 8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ ಮತ ಎಣಿಕೆ ಕಾರ್ಯಾರಂಭವಾಗಿದೆ. ಇನ್ನೆನ್ನು ಕೆಲವೇ ಗಂಟೆಗಳಲ್ಲಿ ಅಭ್ಯರ್ಥಿಗಳ ಅಳಿವು-ಉಳಿವಿನ ಬಗ್ಗೆ ಫಲಿತಾಂಶ ಹೊರಬೀಳಲಿದೆ.

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಈ ವೇಳೆ ಮತ ಎಣಿಕಾ ಕೇಂದ್ರದ ಮುಂಭಾಗದಲ್ಲಿ ತಿಂಡಿ ತಿನ್ನಲು ವ್ಯವಸ್ಥೆ ಮಾಡಿದ್ದಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆಕ್ರೋಶಗೊಂಡಿದ್ದಾರೆ.

ನಿಪ್ಪಾಣಿ, ಚಿಕ್ಕೋಡಿ-ಸದಲಗಾ, ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹುಕ್ಕೇರಿ, ಅರಬಾವಿ, ಗೋಕಾಕ್, ಯಮಕನಮರಡಿ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮಾಂತರ, ಖಾನಾಪುರ, ಕಿತ್ತೂರು, ಬೈಲಹೊಂಗಲ, ಸವದತ್ತಿ ಯಲ್ಲಮ್ಮ, ರಾಮದುರ್ಗ ಕ್ಷೇತ್ರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 18 ವಿಧಾನಸಭಾ ಕ್ಷೇತ್ರಗಳಿವೆ. ಇಲ್ಲಿ 2013ರಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಿತ್ತು. ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ಮತ ಎಣಿಕೆ ಆರಂಭ: ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರದ ಮತ ಏಣಿಕೆ ಆರ್ ಪಿಡಿ ಕಾಲೇಜಿನಲ್ಲಿ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ.

8 ಗಂಟೆಯಿಂದ ಪೋಸ್ಟಲ್ ಬ್ಯಾಲೆಟ್ ಪೇಪರ್ ಕೌಟಿಂಗ್ ನಡೆಯುತ್ತಿದ್ದು, 8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X