ಶಿರಾ | ಬರೆದಂತೆ ಬದುಕಿದವರು ನಾಡೋಜ ಬರಗೂರು ರಾಮಚಂದ್ರಪ್ಪ : ಹನುಮಂತೇಗೌಡ

Date:

Advertisements

ನುಡಿದಂತೆ ನಡೆಯಬೇಕು, ಬರೆದಂತೆ ಬದುಕಬೇಕು’ ಎನ್ನುವ ಮಾತಿಗೆ ಡಾ.ಬರಗೂರು ರಾಮಚಂದ್ರಪ್ಪನವರ ಜೀವನ ಮತ್ತು ಸಾಹಿತ್ಯ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಚಲನಚಿತ್ರ ನಟ ಹನುಮಂತೇಗೌಡ ಹೇಳಿದರು.

ಶಿರಾ ನಗರದ ಆರ್.ಮುದ್ದುರಂಗೇಗೌಡ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಜನ್ಮದಿನದ ಅಂಗವಾಗಿ ಅವರ ಬದುಕು ಬರಹ ಕುರಿತ ಬಿ.ಇಡಿ ಪ್ರಶಿಕ್ಷಣಾರ್ಥಿಗಳೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನ ಹೆಮ್ಮೆಯ ಕವಿಗಳು, ಚಲನಚಿತ್ರ ನಿರ್ದೇಶಕರು, ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ಎಂದೂ ಯಾವುದೇ ಧರ್ಮ, ರಾಜಕೀಯದ ಬಗ್ಗೆ ಮಾತನಾಡದೆ ಯಾವಾಗಲೂ ಮನುಷ್ಯತ್ವ, ಪ್ರೀತಿಯ ಬಗ್ಗೆ ಮಾತನಾಡಿದವರು. ಅವರ ಎಲ್ಲಾ ಕೃತಿಗಳಲ್ಲೂ ಯಾವುದೇ ಗೊಂದಲವಿಲ್ಲ. ಎಲ್ಲವೂ ಸ್ಪಷ್ಟವಾಗಿ ವಿವರಿಸಿದ್ದಾರೆ. ಅವರ ಭಾಷಣವೆಂದರೂ ಅತ್ಯದ್ಭುತವಾಗಿರುತ್ತದೆ ಎಂದರು.

ಆರ್.ಮುದ್ದುರಗೇಗೌಡ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಎಂ.ರಂಗನಾಥ್ ಮಾತನಾಡಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಶಿರಾ ತಾಲ್ಲೂಕಿನ ಬರಗೂರಿನಲ್ಲಿ ಜನಿಸಿ ಇಡೀ ದೇಶವೇ ಮೆಚ್ಚುವಂತಹ ಚಲನಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಅವರ ಕೃತಿಗಳು ಎಂದೆಂದಿಗೂ ಜನಮಾನಸದಲ್ಲಿ ಉಳಿಯುವಂತಹುಗಳಾಗಿವೆ. ಬರಗೂರು ರಾಮಚಂದ್ರಪ್ಪ ಅವರು ಇಂದು 76ನೇ ಜನ್ಮದಿನಾಚರಣೆ ಆಚರಿಸಿಕೊಳ್ಳುತ್ತಿದ್ದು, ಅವರ 100ನೇ ಜನ್ಮ ದಿನಾಚರಣೆಯನ್ನು ನಮ್ಮ ಕಾಲೇಜಿನಲ್ಲಿಯೇ ಆಚರಿಸಲಿಕ್ಕೆ ದೇವರು ಆರ್ಶೀವಾದ ಮಾಡಲಿ. ದೇಶವನ್ನು ಕಟ್ಟುವ ಕೆಲಸಕ್ಕೆ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿರಲಿ ಎಂದರು.

Advertisements

ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ, ತಾಲೂಕು ರಂಗಭೂಮಿ ಕಲಾವಿದರ ಸಂಘದ ವಿ.ಎಸ್.ಚಲಪತಿ, ಸಾಹಿತಿ ಡಾ.ದ್ವಾರನಕುಂಟೆ ಲಕ್ಷ್ಮಣ್, ನವೋದಯ ಯುವ ವೇದಿಕೆ ಅಧ್ಯಕ್ಷ ಜಯರಾಮಕೃಷ್ಣ, ಉಪನ್ಯಾಸಕ ಹೆಂದೊರೆ ಶಿವಣ್ಣ, ಡಾ.ಶಂಕರಪ್ಪ, ಸಕ್ಕರ ನಾಗರಾಜು, ಮಹದೇವಪ್ಪ, ಪ್ರಕಾಶ್, ಧರಣಿಕುಮಾರ್, ಗಂಗಾಧರ್, ಭೂತೇಶ್ ಸೇರಿದಂತೆ ಹಲವರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X