ಮುನಿರತ್ನ ವಿರುದ್ಧ ಬಿಜೆಪಿಯ ನಾಯಕನ ದೂರು: ಏನಿದು ಆರೋಪ?

Date:

Advertisements

ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ 20ಕ್ಕೂ ಹೆಚ್ಚು ದಿನಗಳ ನಂತರ ಜಾಮೀನಿನ ಮೇಲೆ ಹೊರ ಬಂದಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇದೀಗ ಕಮಿಷನರ್​​ಗೆ ಬಿಜೆಪಿಯ ಮಾಜಿ ಎಂಎಲ್​​​ಸಿ ಓರ್ವರು ದೂರು ನೀಡಿದ್ದಾರೆ.

2018ರ ಚುನಾವಣೆ ವೇಳೆ ನಕಲಿ ವೋಟರ್​ ಐಡಿ ಸೃಷ್ಟಿಸಿದ್ದ ಆರೋಪ ಪ್ರಕರಣ ಸಂಬಂಧ ಮಾಜಿ ಎಂಎಲ್​​ಸಿ ತುಳಸಿ ಮುನಿರಾಜು ಎಂಬುವವರು ಮುನಿರತ್ನ ವಿರುದ್ಧ ದೂರನ್ನು ಕೊಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

Advertisements

ನಕಲಿ ವೋಟರ್​​ ಐಡಿ ಸೃಷ್ಟಿ ಆರೋಪದಡಿ ಜಾಲಹಳ್ಳಿ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈವರೆಗೆ ಆ ಪ್ರಕರಣ ತನಿಖೆ ಸಮರ್ಪಕವಾಗಿ ಆಗಿಲ್ಲ. ಹೈಕೋರ್ಟ್​​​​ ಸೂಚನೆ ಇದ್ದರೂ ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ. ತನಿಖೆಗೆ ಅಧಿಕಾರಿ ನೇಮಿಸಲು ನ್ಯಾಯಾಲಯ ಆದೇಶವೂ ಮಾಡಿತ್ತು. ನಾನು ಪ್ರತ್ಯಕ್ಷ ಸಾಕ್ಷಿ ಇದ್ದೇನೆ ಎಂದರೂ ತನಿಖೆ ಮಾಡಲಿಲ್ಲ. ಈ ವಿಚಾರಕ್ಕೆ 6 ವರ್ಷಗಳಿಂದ ನಾನು ಹೋರಾಟ ಮಾಡುತ್ತಲೇ ಇದ್ದೇನೆ. ಸಾಕ್ಷಿಗಳಿಗೆ ಬೆದರಿಸಿ ಕೇಸ್​​ ವಾಪಸ್​​ ತೆಗೆಸಿದ್ದಾರೆ ಎಂದು ಆರೋಪಿಸಿ ಕಮಿಷನರ್​, ಡಿಜಿ, ಐಜಿಪಿಗೆ ತುಳಸಿ ಮುನಿರಾಜು ಅವರು ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X