ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್‌ ತಂಡ 1988ರ ರ ನಂತರ ಮೊದಲ ಬಾರಿಗೆ ಭಾರತದಲ್ಲಿ ಗೆದ್ದಿದೆ. 1988ರ ನಂತರ ನ್ಯೂಜಿಲೆಂಡ್‌ ತಂಡ ಭಾರತದಲ್ಲಿ ಯಾವುದೇ ಟೆಸ್ಟ್‌ನಲ್ಲಿ ಗೆಲುವು ಗಳಿಸಿರಲಿಲ್ಲ.

ಕೊನೆಯ ಹಾಗೂ ಐದನೇ ದಿನವಾದ ಇಂದು ಟೀಂ ಇಂಡಿಯಾ ನೀಡಿದ್ದ 107 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕಿವೀಸ್‌ ಪಡೆ ತನ್ನ 2ನೇ ಇನಿಂಗ್ಸ್‌ನಲ್ಲಿ 27.4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಕಳೆದುಕೊಂಡು ಸುಲಭವಾಗಿ ಜಯಗಳಿಸಿತು. ವಿಲ್‌ ಯಂಗ್‌ ಅಜೇಯ (48) ಹಾಗೂ ರಚಿನ್‌ ರವೀಂದ್ರ ಅಜೇಯ (39) ರನ್‌ ಗಳಿಸಿ ನ್ಯೂಜಿಲೆಂಡ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮೂಲಕ ಕಿವೀಸ್‌ ಪಡೆ ಮೂರು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

Advertisements

ಭಾರತ ತಂಡದವರು ಮೊದಲ ಇನಿಂಗ್ಸ್‌ನಲ್ಲಿ ಕಳೆಪೆ ಪ್ರದರ್ಶನ ನೀಡಿ 46 ರನ್‌ಗಳಿಗೆ ಆಲೌಟ್‌ ಆಗಿದ್ದರು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್‌ ತಂಡ ರಚಿನ್‌ ರವಿಂದ್ರ ಶತಕ, ಡೇವಿಡ್‌ ಕಾನ್ವೆ ಹಾಗೂ ಟಿಮ್‌ ಸೌಥಿ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 402 ರನ್‌ ಪೇರಿಸಿ 356 ರನ್‌ಗಳ ಬೃಹತ್‌ ಮುನ್ನಡೆ ಪಡೆದಿದ್ದರು.

ಎರಡನೇ ಇನಿಂಗ್ಸ್ ಆಡಿದ್ದ ಭಾರತ ತಂಡ ಸರ್ಫರಾಜ್‌ ಖಾನ್‌ ಭರ್ಜರಿ ಶತಕ,ರಿಷಬ್‌ ಪಂತ್‌, ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರ ಅರ್ಧ ಶತಕಗಳು ದಾಖಲಿಸಿದ ಪರಿಣಾಮ 462 ರನ್‌ ಬಾರಿಸಿ ಪ್ರವಾಸಿ ನ್ಯೂಜಿಲೆಂಡ್‌ ತಂಡಕ್ಕೆ 107 ರನ್‌ ಗುರಿ ನೀಡಿದ್ದರು.

ಸಾಧಾರಣ ಗುರಿಯಾದ ಕಾರಣ ನ್ಯೂಜಿಲೆಂಡ್‌ ತಂಡ ಸುಲಭವಾಗಿ ಗೆಲುವು ಪಡೆದಿದೆ. ಟೀಂ ಇಂಡಿಯಾ ಪರ ಜಸ್‌ಪ್ರೀತ್‌ ಬುಮ್ರಾ 2 ವಿಕೆಟ್‌ ಪಡೆದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X