ಗದಗ | ಅನುಸೂಚಿತ ಜಾತಿ, ಬುಡಕಟ್ಟುಗಳ ಉಪಹಂಚಿಕೆ ಕಾಯ್ದೆ, ನಿಯಮಗಳ ಜಾಗೃತಿ ಕಾರ್ಯಾಗಾರ

Date:

Advertisements

ತಳಸಮುದಾಯದ ಜನರಿಗೆ ಸೌಲಭ್ಯಗಳ ಕುರಿತು ಮಾಹಿತಿ ತಿಳಿಸುವ ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಉಪ ಹಂಚಿಕೆ ಕಾಯ್ದೆ ಮತ್ತು ನಿಯಮಗಳ ಜಾಗೃತಿ ಕಾರ್ಯಾಗಾರ ಬಹಳ ಮುಖ್ಯ ಎಂದು ಶಿಕ್ಷಕ ರಾಮಚಂದ್ರ ಹಂಸನೂರ ಹೇಳಿದರು.

ಗದಗ ಪಟ್ಟಣದ ಚೇತನ್ ಕ್ಯಾಂಟೀನ್ ಹತ್ತಿರವಿರುವ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಜಾಗೃತಿ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ “ಕರ್ನಾಟಕ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಉಪಹಂಚಿಕೆ ಕಾಯ್ದೆ ಮತ್ತು ನಿಯಮಗಳ” ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ದಲಿತ ಬಹುಜನ ಚಳುವಳಿ ಮುಖಂಡ ಎಂ ವೆಂಕಟೇಶ್ ಮಾತನಾಡಿ, “ನಮ್ಮ ದಲಿತ ಸಮುದಾಯಗಳಿಗೆ ಸಾಕಷ್ಟು ಮಾಹಿತಿ ಕೊರತೆಯಿದೆ. ಹಾಗಾಗಿ ಸರಿಯಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ನೀವು ಈ ಕಾಯ್ದೆಯ ಬಗ್ಗೆ ತಿಳಿಯದೇ ಇರುವುದರಿಂದ, ಸರ್ಕಾರ ಮಟ್ಟದಲ್ಲಿ‌ ಸರಿಯಾಗಿ ಕಾಯ್ದೆಯ ನಿಯಮಗಳು ಜಾರಿಯಾಗುತ್ತಿಲ್ಲ. ಈ ಕಾಯ್ದೆಯಲ್ಲಿ ವಯಕ್ತಿಕ ಅಭಿವೃದ್ಧಿ, ಸಾಮಾಜಿಕ ವಲಯ, ಅತಿಹೆಚ್ಚು ಜನರು ಇರುವ ಕಾಲೋನಿ, ಹೀಗೆ ಎಲ್ಲ ವಲಯಗಳಲ್ಲಿ ಈ ಕಾಯ್ದೆಯ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಬೇಕು. ಆಗ ನಮ್ಮನ್ನು ಯಾರೂ ಮೋಸಗೊಳಿಸಲು ಬರುವುದಿಲ್ಲ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪಾರ್ಕ್‌ನಲ್ಲಿ ವಾಕಿಂಗ್‌ ಮಾಡುತ್ತಲೇ ಸಾರ್ವಜನಿಕರ ಅಭಿಪ್ರಾಯ ಆಲಿಸಿದ ಶಾಸಕ ರವಿ ಗಣಿಗ

ದಲಿತ ಮುಖಂಡ ಸುರೇಶ್ ಛಲವಾದಿ ಮಾತನಾಡಿ, “ಬಡವರಿಗೆ ಸಾಕಷ್ಟು ಅನ್ಯಾಯಗಳಾಗುತ್ತಿವೆ. ಯಾರಿಗೆ ಸೌಲಭ್ಯಗಳು ಸಿಗಬೇಕು ಅವರಿಗೆ ಸಿಗುತ್ತಿಲ್ಲ. ಇದ್ದವರಿಗೆ ಈ ಸೌಲಭ್ಯಗಳು ಸಿಗುತ್ತಿವೆ. ಇಂತಹ ಕಾರ್ಯಾಗಾರಗಳ ಮೂಲಕ ನಾವೆಲ್ಲರೂ ಅರಿವು ಮೂಡಿಸಿಕೊಳ್ಳಬೇಕು” ಎಂದರು.

ಕಾರ್ಯಾಗಾರದಲ್ಲಿ ಚಂದ್ರಕಾಂತ್ ಚವ್ಹಾಣ, ಪ್ರಕಾಶ್ ಹೊಸಳ್ಳಿ, ಹಣಮಂತ ಪೂಜಾರ್, ಮಜುನಾಥ ಬುರಡಿ, ಶರೀಪ್ ಬಿಳಿಯಲಿ, ರಮೇಶ್ ಕೋಳೂರು, ಶರಣಪ್ಪ ಸಂಗನಾಳ, ಮುತ್ತು ಬಿಳಿಯಲಿ, ನಾಗಮ್ಮ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X