ಸರ್ಕಾರಿ ಕೆಲಸ ಕೊಡಿಸುತ್ತೇನೆಂದು 90 ಲಕ್ಷ ರೂ. ವಂಚನೆ; ಪೊಲೀಸ್‌ ಪೇದೆ​ ಅಮಾನತು

Date:

Advertisements

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 47 ಲಕ್ಷ ರೂ. ಹಣ ಮತ್ತು ಸುಮಾರು 800 ಗ್ರಾಂ ಚಿನ್ನ (ಸುಮಾರು 45 ಲಕ್ಷ ರೂ. ಮೌಲ್ಯ) ಕಿತ್ತುಕೊಂಡು ವಂಚಿಸಿದ್ದ ಬೆಂಗಳೂರಿನ ಪೊಲೀಸ್‌ ಹೆಡ್‌ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ಭಾಗ್ಯಮ್ಮ ನೀಡಿದ ದೂರಿನ ಮೇಲೆ ನಗರ ಸಶಸ್ತ್ರ ಮೀಸಲು ಪ್ರಧಾನ ಕಚೇರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಪೊಲೀಸ್‌ ಪೇದೆ ಪ್ರಶಾಂತ್ ಕುಮಾರ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಆತನ ವಿರುದ್ಧ ನಂದಿನಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಆರೋಪಿ ಹೆಡ್‌ಕಾನ್ಸ್‌ಟೇಬಲ್ ಪ್ರಶಾಂತ್ ಕುಮಾರ್ ತಮಗೆ 2011ರಲ್ಲಿ ಪರಿಚಯವಾಗಿದ್ದರು. ತನಗೆ ಹಲವು ಉನ್ನತ ಅಧಿಕಾರಿಗಳು ಪರಿಚಯವಿದ್ದಾರೆ. ಅವರೊಂದಿಗೆ ಮಾತನಾಡಿ ನನ್ನ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸಿಸುತ್ತೇನೆಂದು ಹೇಳಿ ನಮ್ಮನ್ನು ಪ್ರಶಾಂತ್ ನಂಬಿಸಿದ್ದರು” ಎಂದು ಭಾಗ್ಯಮ್ಮ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

Advertisements

“ಕೆಲ ದಿನಗಳ ಬಳಿಕ, ಮಂಜುನಾಥ್ ಪ್ರಸಾದ್ ಎಂಬ ವ್ಯಕ್ತಿಯನ್ನು ಕರೆ ತಂದಿದ್ದ ಪ್ರತಾಶ್, ಅವರು ತಮ್ಮ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಂದು ಪರಿಚಯಿಸಿಕೊಟ್ಟಿದ್ದರು. ನನ್ನ ಇಬ್ಬರು ಮಕ್ಕಳಿಗೆ ಮೂರು ತಿಂಗಳಲ್ಲಿ ಎಫ್​ಡಿಎ, ಎಸ್​ಡಿಎ ಶ್ರೇಣಿಯ ಕೆಲಸ ಕೊಡಿಸುತ್ತೇವೆಂದು ಹೇಳಿದ್ದರು. ಕೆಲಸ ಕೊಡಿಸಲು ಹಣ ಬೇಕೆಂದು ಒಟ್ಟು 47 ಲಕ್ಷ ರೂ. ನಗದು ಮತ್ತು 857 ಗ್ರಾಂ. ಚಿನ್ನಾಭರಣ ಪಡೆದುಕೊಂಡರು. ಆದರೆ, ನನ್ನ ಮಕ್ಕಳಿಗೆ ಯಾವುದೇ ಸರ್ಕಾರಿ ಉದ್ಯೋಗ ಕೊಡಿಸಿಲ್ಲ” ಎಂದು ಭಾಗ್ಯಮ್ಮ ಆರೋಪಿಸಿದ್ದಾರೆ.

ಆರೋಪಿ ಪ್ರಶಾಂತ್, ಮಂಜುನಾಥ್ ಹಾಗೂ ಪ್ರಶಾಂತ್ ಪತ್ನಿ ದೀಪಾ ವಿರುದ್ಧ ಭಾಗ್ಯಮ್ಮ ದೂರು ನೀಡಿದ್ದು, ಮುವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಶಾಂತ್ ತಲೆಮರೆಸಿಕೊಂಡಿದ್ದಾರೆ. ಪ್ರಶಾಂತ್‌ನನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X