ಸಾವಿನ ದುಃಖದಲ್ಲೂ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹಾಜರು

Date:

Advertisements

ಕರ್ನಾಟಕದಲ್ಲಿ ಯಾವ ರಾಜಕೀಯ ಪಕ್ಷ ತನ್ನ ಹಿಡಿತ ಸಾಧಿಸಲಿದೆ ಎಂಬ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹಿನ್ನೆಡೆ ಮುನ್ನೆಡೆಯ ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಮನೆಯಲ್ಲಿ ಸಾವಿನ ಕಹಿ ಘಟನೆ ಮತ್ತು ದುಃಖದ ವಾತವರಣವಿದ್ದರೂ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಮತ ಎಣಿಕೆಗೆ ಹಾಜರಾಗಿದ್ದಾರೆ.

ಮತ ಎಣಿಕೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆ ಮುಖ್ಯವಾದ ಕಾರಣ ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಸಹೋದರನ ಮಗನ ಮೃತದೇಹ ಮನೆಯಲ್ಲಿದ್ದರೂ ಮತ ಎಣಿಕೆ ಕೇಂದ್ರದಲ್ಲಿ ಹಾಜರಾಗಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಅವರ ಸಹೋದರನ ಮಗ ರೂಪ್ ಕುಮಾರ್ ನಾಯಕ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಸುರಪುರದಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Advertisements

ಮೇ10 ರಂದು ಮತದಾನ ಪೂರ್ಣಗೊಂಡು, ಎರಡು ದಿನ ವಿಶ್ರಾಂತಿಯ ದಿನವಾದ ನಂತರ, ಶನಿವಾರ ರಾಜ್ಯದೆಲ್ಲೆಡೆ ಯಾರು ಗೆಲುವು ಸಾಧಿಸುತ್ತಾರೆ ಎಂಬುದಕ್ಕೆ ಪೂರಕವಾಗಿ ಹಲವು ಸುತ್ತಿನ ಮತ ಎಣಿಕೆ ನಡೆಯುತ್ತಿದೆ. ಯಾವ ರಾಜಕೀಯ ನಾಯಕರಿಗೆ ಮುನ್ನೆಡೆ, ಹಿನ್ನೆಡೆಯಾಗಲಿದೆ ಎಂಬ ಫಲಿತಾಂಶ ಇಂದು ನಿರ್ಣಯದ ಕುತೂಹಲ ಮತ್ತು ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ನಾಯಕರಿಗೆ ಮತದಾನ ಎಣಿಕೆ ಅತಿ ಮುಖ್ಯವಾದ ದಿನ. ಸದ್ಯ ಮತ ಎಣಿಕೆ ಆರಂಭಗೊಂಡಿದ್ದು, ರಾಜಾ ವೆಂಕಟಪ್ಪ ನಾಯಕ್ ಮುನ್ನಡೆ ಕಾಯ್ದು ಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನೀಲಿ ಶಾಲು ಕಳಚಿಟ್ಟ ಎನ್‌ ಮಹೇಶ್‌ಗೆ ಸೋಲಿನ ಭೀತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X