ಬೆಳಗಾವಿ | ಮಳೆಗೆ ಸಿಲುಕಿ ಹಾನಿಗೊಳಗಾದ ಮೆಕ್ಕೆಜೋಳ; ಪರಿಹಾರದ ನಿರೀಕ್ಷೆಯಲ್ಲಿ ರೈತರು

Date:

Advertisements

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮೆಕ್ಕೆಜೋಳವು ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಐದಾರು ತಿಂಗಳಿನಿಂದ ಬಿತ್ತಿ ಗೊಬ್ಬರ ಹಾಕಿ ನೀರು ಹಾಯಿಸಿ ಮೆಕ್ಕೆಜೋಳ ಬೆಳೆದಿದ್ದು, ಸದ್ಯ ಗೋವಿನಜೋಳದ ತೆನೆಯನ್ನು ಮುರಿದು ರಾಶಿ ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಎನ್ನುವ ಸಂದರ್ಭದಲ್ಲಿಯೇ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಗೋವಿನ ಜೋಳದ ತೆನೆಗಳು ಮಳೆನೀರಿನ ಪಾಲಾಗಿವೆ. ಲಕ್ಷಾಂತರ ರೂಪಾಯಿಗಳ ಗೋವಿನಜೋಳ ಬೆಳೆಯು ನಾಶವಾಗಿದ್ದು, ರೈತರಿಗೆ ದಿಕ್ಕೇ ತೊಚದಂತಾಗಿದೆ.

ಕೊಡ್ಲಿವಾಡ ಗ್ರಾಮದ ರೈತ ರಾಮಪ್ಪ ಹಾರುಗೊಪ್ಪ ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಎರಡು ಎಕರೆ ಭೂಮಿಯಲ್ಲಿ ಗೋವಿನ ಜೊಳ ಬೆಳೆದಿದ್ದು, ತೆನೆ ಮುರಿದು ತೋಟದಲ್ಲಿ ರಾಶಿ ಮಾಡಲು ಹಾಕಲಾಗಿತ್ತು. ಆದರೆ ಅನಿರೀಕ್ಷಿತವಾಗಿ ಮಳೆ ಬಂದಿದ್ದರಿಂದ ತೆನೆಗಳು ಮಳೆಗೆ ಸಿಲುಕಿ ಮೊಳಕೆ ಬಂದಿವೆ. ಇದರಿಂದ ಮಾರುಕಟ್ಟೆಯಲ್ಲಿ ಯಾರೂ ಇವುಗಳನ್ನು ಕೊಂಡುಕೊಳ್ಳುವದಿಲ್ಲ. ಐದಾರು ತಿಂಗಳಿಂದ ಬೆಳೆದ ಗೋವಿನ ಜೋಳದ ಬೆಳೆಯು ನಾಶವಾಗಿ ನಷ್ಟವಾಗಿದೆ. ಅಧಿಕಾರಿಗಳು ಗಮನಹರಿಸಿ ಪರಿಹಾರ ನೀಡಬೇಕು” ಎಂದು ಅವಲತ್ತುಕೊಂಡರು.

Advertisements
ಮೆಕ್ಕೆಜೋಳ ಹಾನಿ

ಈ ಸುದ್ದಿ ಓದಿದ್ದೀರಾ? ಈ ದಿನ ಫಲಶೃತಿ | ಪಡಿತರ ಗೋದಾಮಿಗೆ ಗಜೇಂದ್ರಗಡ ಅಧಿಕಾರಿಗಳ ಭೇಟಿ; ಆಹಾರ ನಿಯಮ ಪಾಲನೆಗೆ ಸೂಚನೆ

ಈ ಕುರಿತು ಯರಗಟ್ಟಿ ತಾಲೂಕಿನ ಕೃಷಿ ಅಧಿಕಾರಿಗಳನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ, “ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಸಮಿಕ್ಷೆ ಮಾಡುತ್ತೆವೆ ಹಾಗೂ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X