ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

Date:

Advertisements

ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ.

288 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ, ಶಿವಸೇನಾ (ಶಿಂದೆ ಬಣ) ಮತ್ತು ಎನ್​ಸಿಪಿ (ಅಜಿತ್ ಪವಾರ್) ಪಕ್ಷಗಳು ಮಹಾಯುತಿ ಮೈತ್ರಿಕೂಟವಾಗಿ ಕಣಕ್ಕಿಳಿದಿವೆ. ಈ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಈ ಮೈತ್ರಿಕೂಟ ಪಕ್ಷಗಳ ಮಧ್ಯೆ ಸೀಟು ಹಂಚಿಕೆ ಆಗಿದೆ. ಉಳಿದ 28 ಸ್ಥಾನಗಳಿಗೆ ಮಾತುಕತೆ ನಡೆಯುತ್ತಿದೆ.

ಮೂಲಗಳ ಪ್ರಕಾರ 260 ಸ್ಥಾನಗಳಲ್ಲಿ ಬಿಜೆಪಿಗೆ 142 ಕ್ಷೇತ್ರಗಳು, ಶಿವಸೇನಾ ಮತ್ತು ಎನ್​ಸಿಪಿ ಪಕ್ಷಗಳಿಗೆ ಕ್ರಮವಾಗಿ 66 ಮತ್ತು 52 ಕ್ಷೇತ್ರಗಳು ಸಿಕ್ಕಿವೆ ಎನ್ನಲಾಗಿದೆ. ಇನ್ನುಳಿದ 28 ಕ್ಷೇತ್ರಗಳನ್ನೂ ಶೀಘ್ರದಲ್ಲೇ ಹಂಚಿಕೆ ಮಾಡುವ ಸಾಧ್ಯತೆಯಿದೆ.

Advertisements

ಬಿಜೆಪಿ ಸದ್ಯ 99 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಾಗಪುರ್ ನೈರುತ್ಯ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಬವಾನ್​ಕುಲೆ ಅವರು ಕಾಮಠಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಸಚಿವರಾದ ಗಿರೀಶ್ ಮಹಾಜನ್ ಅವರಿಗೆ ಜಾಮ್ನರ್, ಸುಧೀರ್ ಮುಂಗಾಂತಿವಾರ್ ಅವರಿಗೆ ಬಲ್ಲಾರ್​ಪುರ್, ಆಶೀಶ್ ಶೆಲಾರ್ ಅವರಿಗೆ ವಾಂದ್ರೆ ಪಶ್ಚಿಮ, ಮಂಗಲ್ ಪ್ರಭಾತ್ ಲೋಧಾ ಅವರಿಗೆ ಮಲಬಾರ್ ಹಿಲ್, ರಾಹುಲ್ ನರ್ವೇಕರ್ ಅವರಿಗೆ ಕೊಲಾಬ, ಛತ್ರಪತಿ ಶಿವೇಂದ್ರ ರಾಜೇ ಭೋಸಲೆ ಅವರಿಗೆ ಸತಾರ ಕ್ಷೇತ್ರದ ಟಿಕೆಟ್ ಸಿಕ್ಕಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಒಟ್ಟಿಗೆ ಈ ಬಾರಿ ವಿಧಾನಸಭಾ ಚುನಾವಣೆಗಳಾಗುತ್ತಿವೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಮತ್ತು 20, ಎರಡು ಹಂತದಲ್ಲಿ ಮತದಾನವಾಗುತ್ತಿದೆ. ನವೆಂಬರ್ 23ರಂದು ಎರಡೂ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X