ಬೆಳಗಾವಿ | ʼಗೃಹಲಕ್ಷ್ಮಿʼ ಯೋಜನೆ ಹಣ ಕೂಡಿಟ್ಟು ಎತ್ತು ಖರೀದಿಸಿದ ರೈತ ಮಹಿಳೆ

Date:

Advertisements

ಬೆಳಗಾವಿ ಜಿಲ್ಲೆಯ ಬಡ ರೈತ ಕುಟುಂಬವೊಂದು ಕೃಷಿ ಚಟುವಟಿಕೆಗೆ ಅನುಕೂಲವಾಗಲಿ ಎಂದು ಗೃಹಲಕ್ಷ್ಮೀ ಹಣ ಕೂಡಿಟ್ಟು ಎತ್ತು ಖರೀದಿಸಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ಬಸವ್ವ ಶಿವಪ್ಪ ಬುಳ್ಳಿ ದಂಪತಿ ಎತ್ತು ಖರೀದಿಸಿದ್ದಾರೆ. 22 ಸಾವಿರ ರೂ. ಹಣದಿಂದ ಒಂದು ಎತ್ತನ್ನು ಖರೀದಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮೀ ಹಣವನ್ನು ಜನರು ನಾನಾ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಇತ್ತೀಚೆಗೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿಸಿದ್ದು, ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ ಬಗ್ಗೆ ಸುದ್ದಿಯಾಗಿತ್ತು.

Advertisements

ಈ ಹಿಂದೆ ಬಸವ್ವ ಅವರ ಮನೆಯಲ್ಲಿ ಒಂದೇ ಎತ್ತು ಇತ್ತು. ಇದರಿಂದ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿತ್ತು. ಮತ್ತೊಂದು ಎತ್ತು ಖರೀದಿಸಬೇಕು ಎಂದರೆ ಹಣದ ಅಭಾವವಿತ್ತು. ಹಾಗಾಗಿ, 11 ತಿಂಗಳ ಗೃಹಲಕ್ಷ್ಮೀ ಹಣವನ್ನು ಸೇರಿಸಿದ ಬಸವ್ವ ಒಂದು ಎತ್ತು ಖರೀದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬಸವ್ವ ಮನೆಗೆ ಗೋಕಾಕ್ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಮಹಾಂತೇಶ್ ಕಡಾಡಿ ಭೇಟಿ ನೀಡಿ, ದಂಪತಿಗೆ ವೈಯಕ್ತಿಕವಾಗಿ ನೆರವು ನೀಡಿದರು. ಬೇಸಾಯವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಗೆ ಅನುಕೂಲವಾಗಿದೆ. ಯೋಜನೆ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಬಸವ್ವ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X