ಗುಬ್ಬಿ | ಡೈರಿ ಚುನಾವಣೆ ನಡೆಸಲು ಕಮಿಷನ್ ಪಡೆದು ಗುತ್ತಿಗೆದಾರರಿಗೆ ರೈತರನ್ನು ಅಡವಿಟ್ಟ ಗುಬ್ಬಿ ಶಾಸಕರು : ಎಸ್.ಡಿ.ದಿಲೀಪ್ ಕುಮಾರ್ ಆರೋಪ

Date:

Advertisements

ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ತಿಳಿಯುವುದಿಲ್ಲ ಎಂಬಂತೆ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆದು ಕಾಮಗಾರಿ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುವ ಗುಬ್ಬಿ ಶಾಸಕರು ಗುತ್ತಿಗೆದಾರರಿಗೆ ತಾಲೂಕಿನ ರೈತರನ್ನ ಅಡವಿಟ್ಟು ಡೈರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.

ಗುಬ್ಬಿ ತಾಲೂಕಿನ ಗಂಗಸಂದ್ರ ಬಳಿಯ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿರ್ಮಾಣಕ್ಕೆ 50 ಲಾರಿಗಳಲ್ಲಿ 12 ಅಡಿ ಉದ್ದದ ಪೈಪ್ ಗಳನ್ನು ಹೊತ್ತುತಂದ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಕ್ಸ್ ಪ್ರೆಸ್ ಕೆನಾಲ್ ಗುತ್ತಿಗೆದಾರರಿಂದ ಲಂಚ ಪಡೆದು ಆ ಹಣದಿಂದ ತನ್ನ ಹೆಂಡತಿಯನ್ನು ಕೆ.ಎಂ.ಎಫ್ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಲು ಡೈರಿಯ ನಿರ್ದೇಶಕರಿಗೆ 50 ಸಾವಿರದಿಂದ 1 ಲಕ್ಷ ಹಣ ಕೊಟ್ಟು ಖರೀದಿಗೆ ಮುಂದಾಗಿದ್ದಾರೆ ಎಂದು ನೇರ ಆರೋಪ ಮಾಡಿದರು.

ರೈತರ ಬದುಕಿನ ಚೆಲ್ಲಾಟ ಆಡುವ ಈ ಪೈಪ್ ಲೈನ್ ಕಾಮಗಾರಿ ಮೂಲಕ ಕಮಿಷನ್ ಹಣ ಪಡೆಯುವ ಅಗತ್ಯವಿರಲಿಲ್ಲ. ಹಣ ಬೇಕಿದ್ದರೆ ಅದನ್ನು ನಾನೇ ಕೊಡುತ್ತೇನೆ. ಈ ಕಮಿಷನ್ ಹಣ ವಾಪಸ್ಸು ಕೊಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮ ಜೊತೆ ಹೋರಾಟಕ್ಕೆ ಬರಲಿ ಅದನ್ನು ಬಿಟ್ಟು ನನ್ನ ಕೆ.ಎಸ್.ಆರ್.ಟಿ.ಸಿ ಛೇರ್ಮನ್ ಗಿರಿ ಕೈತಪ್ಪಿ ಹೋಗುತ್ತೆ. ಅಲ್ಲಿನ ಹಳೆಯ ಟೈರ್ ಗಳನ್ನು ಮಾರಿಕೊಂಡು ಕಮಿಷನ್ ಪಡೆಯಲು ಸಾಧ್ಯವಿಲ್ಲ ಎಂದು ಗುತ್ತಿಗೆದಾರರ ಕಮಿಷನ್ ಆಸೆಗೆ ಬಲಿಯಾಗಿ ತಾಲೂಕಿನ ರೈತರನ್ನು ಬಲಿಕೊಟ್ಟು ಬದುಕುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisements

ಕಮಿಷನ್ ಪಡೆಯಲು ತಮ್ಮ ಮಡದಿ ಮುಂದೆ ಬಿಟ್ಟು ಕೆಲಸ ಮಾಡುತ್ತಿರುವ ಗುಬ್ಬಿ ಶಾಸಕರು ಇನ್ನು ಮುಂದಾದರೂ ಎಚ್ಚೆತ್ತು ಪಡೆದುಕೊಂಡಿರುವ ಕಮಿಷನ್ ಹಣ ವಾಪಸ್ ಕೊಟ್ಟು ನಮ್ಮ ಜೊತೆ ಹೋರಾಟಕ್ಕೆ ಇಳಿದರೆ ಒಳ್ಳೆಯದು. ಇಲ್ಲವಾದರೆ ತಾಲೂಕಿನ ರೈತರು ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳದಲ್ಲಿ ರೇಣುಕಾ ಪ್ರಸಾದ್, ಲೋಕೇಶ್, ಸತೀಶ್ ಸೇರಿದಂತೆ ಹಲವು ರೈತಪರ ಹೋರಾಟಗಾರರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X