ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗಿರುವುದರಿಂದ ಅಪಾರ ನಷ್ಟ ಹಾಗೂ ಅಪಾಯವಾಗುವ ಸಂಭವವಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ, ಜನರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆಕಟ್ಟೆಗಳಿಗೆ ತೆರಳದಂತೆ, ಮಳೆಯಿಂದ ಧರೆ, ಗುಡ್ಡಕುಸಿತವಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂಸ್ಟೇ, ರೆಸಾರ್ಟ್, ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಒಂದು ವಾರ ಸ್ಥಗಿತಗೊಳಿಸುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ? ಬೆ. ಗ್ರಾಮಾಂತರ | ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ಕಾರುಗಳು; ಕಾರಿನಲ್ಲಿದ್ದವರು ಬಜಾವ್
ಅಪಾಯಕಾರಿ ಮಟ್ಟ ಮೀರಿ, ಹಳ್ಳ, ಕೆರೆ, ನದಿಗಳು ತುಂಬಿ ಹರಿದು ಹಲವೆಡೆ ಭೂಕುಸಿತವಾಗುತ್ತಿದೆ. ಸಾರ್ವಜನಿಕರು, ಪ್ರವಾಸಿಗರಿಗೆ ಪ್ರವಾಸಿತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಕಾಲ ಮುಂದೂಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಮನವಿ ಮಾಡಿದ್ದಾರೆ.