ಶಿವಮೊಗ್ಗ | ಗೌರಿ ಹಂತಕರಿಗೆ ಸನ್ಮಾನ; ಜಾಮೀನು ವಜಾಕ್ಕೆ ಆಗ್ರಹ

Date:

Advertisements

ಗೌರಿ ಹಂತಕರಿಗೆ ಸನ್ಮಾನ ಮಾಡಿದ್ದು, ಜತೆಗೆ ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್‌ ಮತ್ತು ಗೌರಿ ಬಳಗದಿಂದ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಪ್ರಮುಖರು, “ಗೌರಿ ಹಂತಕರನ್ನು ಸನ್ಮಾನ ಮಾಡಿದವರನ್ನು ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಗೌರಿ ಹಂತಕರ ಜಾಮೀನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಗೌರಿ ಹಂತಕರ ವಿರುದ್ಧ

“ಗೌರಿ ಹಂತಕರಿಗೆ ಶಿಕ್ಷೆಯಾಗಬೇಕೆಂದು ದೇಶ, ವಿದೇಶದಲ್ಲಿ ಆಗ್ರಹ ಕೇಳಿಬಂದಿತ್ತು. ಬಂಧಿತರ ಪೈಕಿ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಪೈಕಿ ಒಬ್ಬನಿಗೆ ಸನ್ಮಾನ ನಡೆದಿದೆ. ಮತ್ತೊಬ್ಬನಿಗೆ ಚುನಾವಣೆ ಉಸ್ತುವಾರಿ ವಹಿಸಲಾಗಿದೆ. ಕರ್ನಾಟಕದಲ್ಲಿ ವೈಚಾರಿಕ ಭಿನ್ನಾಭಿಪ್ರಾಯವಿತ್ತು. ಆದರೆ ಈಗ ಒಬ್ಬನಿಗೆ ಸನ್ಮಾನ ಮಾಡಿ ಮತ್ತಷ್ಟು ಕೊಲೆಗಳಿಗೆ ಪ್ರಚೋದನೆ ನೀಡಿದಂತಾಗಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರಗತಿಪರ ಚಿಂತಕ ಕೆ ಎಲ್ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

Advertisements
ಗೌರಿ ಹಂತಕರ ವಿರುದ್ಧ 2

ಚಿಂತಕ ಚಂದ್ರೇಗೌಡ ಮಾತನಾಡಿ, “ಸಂಚು ರೂಪಿಸಿ ಗೌರಿಯ ಹತ್ಯೆ ಮಾಡಲಾಯಿತು. ಕೊಲೆ ಆರೋಪಿಗಳಿಗೆ ಸನ್ಮಾನ ಮಾಡುವುದು ಸರಿಯಲ್ಲ. ಪ್ರಪಂಚದಲ್ಲಿ ಎಲ್ಲೂ ನಡೆಯದ ಕೃತ್ಯವಿದು. ಗೌರಿಯನ್ನು ಕೊಂದಿರಬಹುದು. ಆದರೆ ಆಕೆಯ ಧ್ವನಿ ಅಡಗಿಸಲು ಸಾಧ್ಯವಿಲ್ಲ” ಎಂದರು.

ಗೌರಿ ಹಂತಕರ ವಿರುದ್ಧ 1

“ನಾವು ಅಹಿಂಸೆ, ಗಾಂಧಿ, ಗೌರಿಯನ್ನು ಪ್ರೀತಿಸುತ್ತೇವೆ. ನಮ್ಮ ಹೋರಾಟವನ್ನು ಸರ್ಕಾರ ಗಮನಿಸಬೇಕು‌. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಸಾಹಿತಿ ಉಷಾ ಒತ್ತಾಯಿಸಿದರು.

ಗೌರಿ ಹಂತಕರ ವಿರುದ್ಧ 3

“ಆರೋಪಿಗಳು ನಿರ್ದೋಷಿಗಳೆಂದು ಬಿಡುಗಡೆಯಾಗಿರುವುದಲ್ಲ. ಐದಾರು ವರ್ಷ ಅವರಿಗೆ ಜಾಮೀನು ದೊರೆತಿರಲಿಲ್ಲ‌. ಮುಖ್ಯ ಸಾಕ್ಷಿಗಳ ವಿಚಾರಣೆ ಮುಗಿದ ಹಿನ್ನಲೆ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಆದರೆ ಇಂತಹವರಿಗೆ ಸನ್ಮಾನ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಸಿದ್ದರಾಮಯ್ಯ ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು” ವಕೀಲ ಕೆ ಪಿ ಶ್ರೀಪಾಲ್‌ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ; ಓರ್ವನ ಬಂಧನ: ಇನ್ನುಳಿದವರಿಗಾಗಿ ಹುಡುಕಾಟ

ಪ್ರಮುಖರಾದ ಶೃಂಗೇಶ್‌, ಟೆಲೆಕ್ಸ್‌ ರವಿಕುಮಾರ್‌, ಶಿವಕುಮಾರ್‌, ಅನಿಲ್‌, ಹಾಲೇಶಪ್ಪ ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X