ಸಿ ಪಿ ಯೋಗೇಶ್ವರ್ ಬಿಜೆಪಿ‌ ಬಿಟ್ಟರೆ, ಕಾಂಗ್ರೆಸ್‌ ಸೇರುವ ಪ್ರಶ್ನೆ ಉದ್ಭವ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಸಿ ಪಿ ಯೋಗೇಶ್ವರ್‌ ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ. ಈಗ ಅವರು ಬಿಜೆಪಿಯಲ್ಲೇ ಇದ್ದಾರೆ, ಬಿಜೆಪಿಯಲ್ಲಿರುವವರ ಬಗ್ಗೆ ನಾನೇಕೆ ಮಾತನಾಡಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.‌

ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳು ‘ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದು ಸಿಎಂ ಹಾಗೂ ಮಾಜಿ ಸಂಸದ ಸುರೇಶ್ ಅವರು ಹೇಳಿದ್ದಾರಲ್ಲ’ ಎಂದು ಕೇಳಿದಾಗ, ”ಈ ವಿಚಾರ ನನಗೆ ಗೊತ್ತಿಲ್ಲ. ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದ್ದಾರೆ. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜತೆ ಚರ್ಚೆ ಮಾಡುತ್ತಿದ್ದಾರೆ” ಎಂದರು.

”ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ತಿಳಿಸಿದರು.

Advertisements

ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, ”ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ. ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ನೀಡಲಿದೆ” ಎಂದರು.

”ಚೌಡೇಶ್ವರಿ ನಗರದಲ್ಲಿ 150 ಎಂಎಂ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ. 300ರಷ್ಟು ಹೆಚ್ಚಿನ ಮಳೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಕೆಲವು ಪ್ರದೇಶದ ಜನರಿಗೆ ಸ್ಥಳಾಂತರ ಮಾಡಲು ಹೇಳಿದ್ದೇವೆ. ಕೇಂದ್ರಿಯ ವಿದ್ಯಾಲಯ ಹಾಗೂ ಟಾಟಾನಗರದಿಂದ ಸುಮಾರು 600 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಹೇಳಿದ್ದೇವೆ. 5 ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

”ಕೆಲವು ಅಪಾರ್ಟ್‌ಮೆಂಟ್‌ಗಳನ್ನು 8 ದಿನಗಳ ಕಾಲ ಮುಚ್ಚಲು ಸೂಚನೆ ನೀಡಲಾಗಿದೆ. 20-25 ಹೆಚ್ ಪಿ ಯಂತ್ರಗಳನ್ನು ಹಾಕಿ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. 20 ಕಡೆಗಳಲ್ಲಿ ನೀರನ್ನು ತೆಗೆಯಲಾಗುತ್ತಿದೆ. ಪ್ರಕೃತಿಯನ್ನು ತಡೆದು ನಿಲ್ಲಿಸಲು ಆಗುವುದಿಲ್ಲ. ದುಬೈನಲ್ಲಿ ಪ್ರವಾಹ, ದೆಹಲಿಯಲ್ಲಿ ಮಾಲಿನ್ಯದ ವಿಚಾರ ನೀವು ನೋಡುತ್ತಿದ್ದೀರಿ. ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ನಾನು ಕೂಡ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಿದ್ದೇನೆ. ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ದಾಸರಹಳ್ಳಿಯಲ್ಲಿ ಟ್ಯಾಂಕ್ ಒಡೆದಿದೆ. ಮಹದೇವಪುರ ವಲಯದಲ್ಲಿ 5 ಬಡಾವಣೆಗಳು ಸಮಸ್ಯೆಗೆ ಸಿಲುಕಿವೆ. ಈ ಎಲ್ಲಾ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ” ಎಂದರು.

ಇಬ್ಬರು ಮಕ್ಕಳು ಕೆರೆಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದಾಗ, ”ನಾನು ಈ ವಿಚಾರ ನೋಡಿದೆ. ಆ ತಾಯಿಯ ಗೋಳು ಕಂಡೆ. ಮಕ್ಕಳ ಶೋಧ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X