ಗುಬ್ಬಿ | ತೊರೇಹಳ್ಳಿ ಅಣೆಯಲ್ಲಿ ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ಜಿಗಿದು ಪಾರಾದ ಚಾಲಕ

Date:

Advertisements

ಗುಬ್ಬಿ ತಾಲೂಕಿನ ಕಸಬ ಹೋಬಳಿ ತೊರೇಹಳ್ಳಿ ಗ್ರಾಮದ ಬಳಿಯ ಅಣೆಯ ಮೇಲಿನ ರಸ್ತೆ ಮುಳುಗಿ ತುಂಬಿ ಹರಿದ ಮಳೆ ನೀರಿಗೆ ಗೂಡ್ಸ್ ವಾಹನ ಕೊಚ್ಚಿ ಹೋಗಿ ತಕ್ಷಣ ಎಚ್ಚೆತ್ತ ಚಾಲಕ ಹೊರ ಬಂದು ಪಾರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೂಲ ಶಿಂಷಾ ನದಿಯ ಈ ಹರಿವು ಪ್ರತಿ ವರ್ಷ ಮಳೆಗಾಲದಲ್ಲಿ ನಾಲ್ಕು ತಿಂಗಳು ಅತ್ಯಧಿಕ ನೀರು ಹರಿಯುತ್ತದೆ. ತೊರೇಹಳ್ಳಿ ಅಣೆ ತುಂಬಿ ರಸ್ತೆ ಸಂಚಾರವೇ ಸ್ಥಗಿತಗೊಳ್ಳಲಿದೆ. ಚಿಕ್ಕನಾಯಕನಹಳ್ಳಿ ಭಾಗದಿಂದ ಕಾರ್ಯ ನಿಮಿತ್ತ ಬಂದ ಟಾಟಾ ಏಸ್ ಗೂಡ್ಸ್ ವಾಹನ ಮಾಮೂಲಿ ರಸ್ತೆ ಎಂದೇ ನೀರಿಗೆ ಇಳಿದು ರಭಸಕ್ಕೆ ಕೊಚ್ಚಿ ಹೋಗಿದೆ. ಚಾಲಕ ಕೂಡಲೇ ದಡಕ್ಕೆ ಧಾವಿಸಿ ಅಪಾಯದಿಂದ ಪಾರಾಗಿದ್ದಾನೆ. ರಾತ್ರಿ ಮುಳುಗಡೆಯಾದ ವಾಹನ ಬೆಳಿಗ್ಗೆ ಕ್ರೇನ್ ಮೂಲಕ ಮೇಲೆತ್ತುವ ಕೆಲಸ ಮಾಡಲಾಯಿತು.

ನೀರಿನಲ್ಲಿದ್ದ ವಾಹನ ಹುಡುಕಿ ಹೊರ ತೆಗೆಯಲು ಗ್ರಾಮಸ್ಥರ ಸಹಕಾರದಿಂದ ಸತತ ನಾಲ್ಕೈದು ಗಂಟೆ ಕಾಲ ಕಾರ್ಯಾಚರಣೆ ಮಾಡಲಾಯಿತು. ಈ ಹಿಂದೆ ಬೈಕ್ ಗಳು ಕೊಚ್ಚಿ ಹೋದ ಘಟನೆಗಳನ್ನು ಸ್ಮರಿಸಿದ ಸ್ಥಳೀಯರು ಅಣೆ ಪಕ್ಕದ ನಮ್ಮ ತೋಟಗಳಿಗೆ ಹೊಸಹಳ್ಳಿ ಮಾರ್ಗವಾಗಿ ಹತ್ತು ಕಿಮೀ ಬಳಸಿ ಬರುವಂತ ದುಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.

Advertisements

“ಎರಡು ದಶಕದಿಂದ ತೊರೇಹಳ್ಳಿ ಅಣೆಗೆ ಸೇತುವೆ ನಿರ್ಮಿಸಿಕೊಡಲು ಸ್ಥಳೀಯರು ಬೇಡಿಕೆ ಸಲ್ಲಿಸುತ್ತಲೇ ಬಂದಿದ್ದರು. ಅಧಿಕಾರಿಗಳು, ಜನ ಪ್ರತಿನಿಧಿಗಳು ಇತ್ತ ಕಡೆ ಗಮನಹರಿಸಿಲ್ಲ. ಪ್ರತಿ ವರ್ಷ ನಾಲ್ಕು ತಿಂಗಳು ವಾಹನ ಸಂಚಾರ ಸ್ಥಗಿತವಾಗಿ ತೊರೇಹಳ್ಳಿ ಸೇರಿದಂತೆ ಮಡೇನಹಳ್ಳಿ, ಗೋಳೆನಹಳ್ಳಿ, ಹೊನ್ನಶೆಟ್ಟಿಹಳ್ಳಿ ಮಾರ್ಗವಾಗಿ ಕಡಬ ಸೇರುವ ಈ ಮಾರ್ಗ ಸಂಪೂರ್ಣ ಸ್ಥಗಿತವಾಗುತ್ತದೆ. ವಾಹನಗಳು ಕೊಚ್ಚಿ ಹೋಗುವ ಅಣೆ ರಸ್ತೆಗೆ ಕೂಡಲೇ ಸೇತುವೆ ನಿರ್ಮಿಸಿ ಪ್ರಾಣ ಹಾನಿಗಳು ಆಗುವ ಮುನ್ನ ಎಚ್ಚರಿಕೆ ವಹಿಸುವಂತೆ ಹೇರೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ. ಬಿ. ರಂಗನಾಥ್ ಅಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X