ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

Date:

Advertisements

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ ಪಕ್ಷದ ದರ್ಶನ್‌ ಪುಟ್ಟಣಯ್ಯ, ಕೆಆರ್‌ಪಿಪಿಯಿಂದ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

ಬಳ್ಳಾರಿಯ ಎಂಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕ್ಲೀನ್‌ ಸ್ವೀಪ್ ಮಾಡಿದೆ. ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಬಳ್ಳಾರಿ, ಬಳ್ಳಾರಿ ನಗರ, ಸಂಡೂರು ಹಾಗೂ ಕೂಡ್ಲಗಿ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳು ವಿಜಯ ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿದೆ. ಬಿಜೆಪಿ ಸರ್ಕಾರದ 13 ಸಚಿವರು ಸೋಲು ಕಂಡಿದ್ದಾರೆ.

Advertisements

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಸವರಾಜ ಬೊಮ್ಮಾಯಿ ಮಾತ್ರ ಗೆಲುವು ಸಾಧಿಸಲು ಶಕ್ತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X