ಹಾಸನ | ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ: ಸಿಪಿಐಎಂ ಧರ್ಮೇಶ್

Date:

Advertisements

ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ‌ ನೀಡಿದಂತಾಗಿದ್ದು, ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಉತ್ತೇಜನ ನೀಡಿದಂತಾಗಿದೆ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಕಳವಳ ವ್ಯಕ್ತಪಡಿಸಿದರು.

ಗೌರಿ ಲಂಕೇಶ್‌ ಹಂತಕರ ಸನ್ಮಾನದ ವಿರುದ್ಧ ಹಾಸನ ನಗರದಲ್ಲಿ ನಾಗರಿಕರು ಪ್ರತಿರೋಧ ವ್ಯಕ್ತಪಡಿಸಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದ ಪರವಾಗಿ ಜಿಲ್ಲಾಧಿಕಾರಿ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಸನ್ಮಾನ ಮಾಡುವುದನ್ನು ಗುಜರಾತ್, ಉತ್ತರ ಪ್ರದೇಶಗಳಲ್ಲಿ ಕಂಡಿದ್ದೆವು. ಎಂತಹ ಸ್ಥಿತಿಗೆ ಈ ರಾಜ್ಯಗಳು ತಲುಪಿದವಲ್ಲಾ ಎಂದು ಮರುಗಿದ್ದೆವು. ಈ ರೀತಿಯಲ್ಲಿ ಅಪರಾಧಿಗಳನ್ನು ಸನ್ಮಾನಿಸಿ ಅಪರಾಧಕ್ಕೆ ಸಾಮಾಜಿಕ ಮನ್ನಣೆ ನೀಡುವುದನ್ನು ನಾವು ಪ್ರತಿಭಟಿಸಿದ್ದೆವು. ಆದರೆ ನಮ್ಮದೇ ರಾಜ್ಯದಲ್ಲಿ, ಕರ್ನಾಟಕದ ಹೆಮ್ಮೆಯ ದನಿ ಗೌರಿ ಲಂಕೇಶ್‌ ಅವರನ್ನು ಕೊಲೆಗೈದ ಆರೋಪಿಗಳನ್ನು ಸನ್ಮಾನಿಸಿರುವುದನ್ನು ಕಂಡು ನಾವು ದಂಗಾಗಿದ್ದೇವೆ. ಇದು ಕರ್ನಾಟಕದ ಪರಂಪರೆಗೆ, ಈ ನೆಲ ಪೋಷಿಸಿಕೊಂಡು ಬರುತ್ತಿರುವ ಮಾನವೀಯ ಮೌಲ್ಯಗಳಿಗೆ ಆದ ದೊಡ್ಡ ಕಳಂಕವೆಂದು ನಾವು ಭಾವಿಸುತ್ತೇವೆ. ಈ ನಡುವೆ ಏನೂ ಆಗಿಲ್ಲವೆಂಬಂತೆ ಗೃಹಇಲಾಖೆ ಇರುವುದನ್ನು ಕಂಡು ಮನಸ್ಸಿಗೆ ಬಹಳ ಬೇಸರವೂ ಆಗಿದೆ” ಎಂದರು.

Advertisements
ಗೌರಿ ಹಂತರಿಗೆ ಸನ್ಮಾನದ ವಿರುದ್ಧ ಆಕ್ರೋಶ 1

“ಕೋಮುಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವ ಪ್ರೇಮಿಯಾಗಿದ್ದ ಗೌರಿ ಲಂಕೇಶ್ ಹಾಗೂ ಡಾ. ಎಂ ಎಂ ಕಲಬುರಗಿಯವರ ಕೊಲೆಗಡುಕ ಆರೋಪಿಗಳು ಬಿಡುಗಡೆಯಾದ ಸಂದರ್ಭದಲ್ಲಿಯೂ ಹಿಂದು ಮತಾಂಧ ಶಕ್ತಿಗಳು ಇಂತಹ ದುಷ್ಕೃತ್ಯ ನಡೆಸಿವೆ. ಈ ಹಿಂದೆ ಗುಜರಾತಿನ ಮುಸ್ಲಿಂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆ ಕುಟುಂಬದ ಸದಸ್ಯರನ್ನು ಕೊಲೆಗೈದ ಅಪರಾಧಿಗಳು ಬಿಡುಗೊಂಡಾಗ ಹಿಂದುತ್ವ ಕೋಮುವಾದಿ ಶಕ್ತಿಗಳು ಅಂತಹ ಅಪರಾಧಿಗಳ ಪರ ನಿಂತು ಅಪರಾಧಿ ದುಷ್ಕೃತ್ಯ ಬೆಂಬಲಿಸಿದ್ದಿದೆ” ಎಂದರು.

“ಇಂತಹ ಸಮಾಜಘಾತುಕ ಶಕ್ತಿಗಳು ನಾಚಿಕೆಯಿಲ್ಲದೆ ತಮ್ಮ ದುಷ್ಕೃತ್ಯ ಮುಂದುವರೆಸಲು ನೈತಿಕ ಶಕ್ತಿ ಒದಗಿಸುವ ಮೂಲಕ ಸಮಾಜದ ಶಾಂತಿ ಸೌಹಾರ್ದತೆಗೆ ಗಂಡಾಂತರವಾಗಿ ಪರಿಣಮಿಸಲಿದೆ. ದುಡಿಯುವ ಜನರು, ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯಕ್ಕೆ ಇಂಬು ನೀಡಲಿದೆ. ಆದ್ದರಿಂದ, ಇಂತಹ ವೈಭವೀಕರಣದ ನಿಗ್ರಹಕ್ಕೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಗೆ ಅಗತ್ಯ. ಕಾನೂನು ರೂಪಿಸಲು ಮತ್ತು ಕಾನೂನು ಕ್ರಮಕ್ಕೆ ಮುಂದಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ನಾವು ಆಗ್ರಹಿಸುತ್ತಿದ್ದೇವೆ. ಎಲ್ಲ ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ಸೌಹಾರ್ದತೆಗಾಗಿ ಕಾರ್ಯ ನಿರ್ವಹಿಸುವ ಶಕ್ತಿಗಳು ಈ ದಿಕ್ಕಿನಲ್ಲಿ ಸರ್ಕಾರಗಳು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಗೌರಿ ಹಂತರಿಗೆ ಸನ್ಮಾನದ ವಿರುದ್ಧ ಆಕ್ರೋಶ 2

“ಕೊಲೆಪಾತಕರಿಗೆ ಮಾಡಿರುವ ಸನ್ಮಾನ, ಕೊಲೆಗೆ ನೀಡಿರುವ ಪ್ರಚೋದನೆಯಾಗಿದೆ. ಹಿಂಸೆಗೆ ಒದಗಿಸಿರುವ ಸಾಮಾಜಿಕ ಮನ್ನಣೆಯಾಗಿದೆ. ಕರ್ನಾಟಕದ ಪ್ರಜ್ಞಾವಂತ ಜನರೆಲ್ಲರೂ ಈ ಪ್ರಚೋದನಕಾರಿ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹೈಕೋರ್ಟ್ ತೀರ್ಪು ಉಲ್ಲಂಘಿಸಿ ವೃದ್ಧ ದಂಪತಿಗೆ ವಂಚನೆ: ವಕೀಲ ವೆಂಕಟೇಶ್ ಆರೋಪ

“ಗೌರಿ ಹಂತಕರಿಗೆ ಸನ್ಮಾನ ಮಾಡಿರುವ ವ್ಯಕ್ತಿಗಳ ಮೇಲೆ ಕೊಲೆ ಪ್ರಚೋದನೆಯಡಿ ಕೇಸು ದಾಖಲಿಸಬೇಕು. ಹಿಂಸೆ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಕೋಮುವಾದಿ ಸಂಘಟನೆಗಳ ಮೇಲೆ ಕ್ರಮ ಜರುಗಿಸಬೇಕು. ಗೌರಿ ಲಂಕೇಶ್ ಕೊಲೆ ವಿಚಾರಣೆಯನ್ನು ತ್ವರಿತಗೊಳಿಸಿ ಹಂತಕರಿಗೆ ಶೀಘ್ರವೇ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

ಹಿರಿಯ ದಲಿತ ಮುಂಖಂಡರಾದ ಎಚ್‌ ಕೆ ಸಂದೇಶ್‌, ಹುಲಿಕಲ್ ರಾಜಶೇಖರ್, ಕದಸಂಸ ರಾಜ್ಯ ಸಂಚಾಲಕ ಎಂ ಸೋಮಶೇಖರ್‌, ಸಾಮಾಜಿಕ ಕಾರ್ಯಕರ್ತ ಇರ್ಷಾದ್ ಅಹಮದ್ ದೇಸಾಯಿ, ದಸಂಸ ಅಂಬೇಡ್ಕರ್‌ವಾದದ ಈರೇಶ್ ಹಿರೇಹಳ್ಳಿ, ಅಂಬುಗ ಮಲ್ಲೇಶ್, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ ಜಿ ಪೃಥ್ವಿ, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X