ವಿಜಯಪುರ | ಕುಂಟು ನೆಪ ಹೇಳದೆ ಒಳಮೀಸಲಾತಿ ಜಾರಿಯಾಗಲಿ: ಡಿ ಬಿ ಮಧುರ

Date:

Advertisements

ರಾಜ್ಯ ಸರ್ಕಾರ ಯಾವುದೇ ಕುಂಟು ನೆಪ ಹೇಳದೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ತಂಗಡಗಿಯಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಡಿ ಬಿ ಮಧುರಿ ಹೇಳಿದರು.

ತಂಗಡಗಿ ಗ್ರಾಮದ ದುರ್ಗಾ ದೇವಸ್ಥಾನದಿಂದ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಸಮುದಾಯದ ಜನರಿಗೆ ಒಳಮೀಸಲಾತಿ ಸೌಲಭ್ಯದ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಈ ರ್ಯಾಲಿ ಮಾಡಲಿದೆ ಎಂದು ಸಂಘಟನೆ ಹೇಳಿದರು.

ಐಕ್ಯತೆ ಸಮಿತಿ ಸಂಚಾಲಕ ತಿಪ್ಪಣ್ಣ ದೊಡಮನಿ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರದಿಂದ ನಮಗೆ ನ್ಯಾಯ ಸಿಕ್ಕಿಲ್ಲ. ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೊಳಿಸುವ ದಿಟ್ಟ ನಿರ್ಧಾರ ತೋರಬೇಕು ಎಂದು ಒತ್ತಾಯಿಸಿದರು.

Advertisements

ವಕೀಲ ಕೆ.ಬಿ. ದೊಡಮನಿ ಮಾತನಾಡಿ, ಶ್ರೇಣೀಕೃತ ಜಾತಿ ತಾರತಮ್ಯ ಅನುಭವಿಸುತ್ತಿಸರುವ ಸಮುದಾಯಗಳಿಗೆ ಕೆನೆ ಪದರ ಆಳವಡಿಸುವ ಯಾವುದೇ ಮರು ಪರಿಶೀಲನಾ ಅರ್ಜಿಗಳು ದಾಖಲಾಗಿದ್ದಲ್ಲಿ ಅದರ ಗಂಭೀರತೆಯನ್ನು ಆಧರಿಸಿ ಸೂಕ್ತ ನಿರ್ದೇಶನ ನೀಡುವ ನ್ಯಾಯಪೀಠಕ್ಕಿದೆ. ಈಗಾಗಲೇ ಪ್ರಕಟವಾಗಿರುವ ತೀರ್ಪನ್ನು ಕಡೆಗಣಿಸದೇ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ವಿಜಯನಗರ | ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವು

ಮುಖಂಡ ಚೆನ್ನಪ್ಪ ವಿಜಯಕರ್ ಮತ್ತು ವಿವಿಧ ಸಂಘಟನೆಗಳ ಮುಖಂಡರು. ಐಕ್ಯತೆ ಸಮಿತಿ ಪದಾಧಿಕಾರಿಗಳು ಹೋರಾಟದಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X