ಚಿನ್ನದಂತ ಕ್ಷೇತ್ರ ಬಿಟ್ಟು ಹೋಗಿ ನಿರುದ್ಯೋಗಿಯಾದೆ : ವಿ ಸೋಮಣ್ಣ ಬೇಸರ

Date:

Advertisements
  • ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ
  • ಯಡಿಯೂರಪ್ಪ ಅವರನ್ನು ಬಿಜೆಪಿ ಮೂಲೆಗುಂಪು ಮಾಡಿಲ್ಲ

ರಾಜ್ಯ ವಿಧಾನಸಭೆ ಚುನಾವಣೆ ಈ ಬಾರಿಯ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

“ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನು ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಇದೀಗ ಜನ ತೀರ್ಮಾನ ಮಾಡಿದ್ದಾರೆ. ಚೆನ್ನಾಗಿ ದುಡಿಯುತ್ತಿದ್ದ ನಾನು ಈಗ ನಿರುದ್ಯೋಗಿಯಾಗಿದ್ದೇನೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ” ಎಂದು ಹೇಳಿದ್ದಾರೆ.

ಬಿಜೆಪಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಿಲ್ಲ. ಅವರ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೀವಲ್ಲ? ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ” ಎಂದು ಮರು ಪ್ರಶ್ನೆ ಮಾಡಿದ್ದಾರೆ.

Advertisements

“ಸೋತ ತಕ್ಷಣ ಎಲ್ಲವೂ ಮುಗಿದು ಹೋಯ್ತಾ? ಪಕ್ಷಕ್ಕೆ ಹಿನ್ನಡೆ ಆಗಿದ್ದು ನಮಗೆಲ್ಲ ಎಚ್ಚರಿಕೆ ಗಂಟೆ. ಜನರ ತೀರ್ಮಾನ ಇದು, ಬದ್ಧರಾಗಬೇಕು. ದೇಶಕ್ಕೆ ಮೋದಿ ಪ್ರಶ್ನಾತೀತ ನಾಯಕರು. ಅವರ ಕೆಲಸಗಳು ಅವಿಸ್ಮರಣೀಯ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳೇ ಅವರ ಗೆಲುವಿಗೆ ಕಾರಣ” ಎಂದಿದ್ದಾರೆ.

“ಎಲ್ಲರಂತೆ ನನಗೂ ಆಸೆಯಿದೆ, ಮಗನಿಗೆ ಟಿಕೆಟ್ ಕೊಡಿ ಎಂದು ಕೇಳಿದ್ದೆ. ಕೊಡಲಿಲ್ಲ, ಎಲ್ಲ ವಿಧಿನಿಯಮದಂತೆ ಆಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ನಡುವೆ ಪೈಪೋಟಿ ಕುರಿತು ಪ್ರತಿಕ್ರಿಯಿಸಿ, “ಅದು ಅವರ ಪಕ್ಷದ ನಿರ್ಧಾರ. ಡಿ ಕೆ ಶಿವಕುಮಾರ್ ನಮ್ಮ ತಾಲೂಕಿನವರು. ಸಿದ್ದರಾಮಯ್ಯ ಹಿರಿಯ ನಾಯಕರು, ಜೊತೆಗೆ ಈಗಾಗಲೇ ಒಮ್ಮೆ ಮುಖ್ಯಮಂತ್ರಿ ಆಗಿದ್ದಾರೆ. ಈಗ ಡಿ ಕೆ ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕಾಗಿರುವವರು. ಯಾರನ್ನು ಸಿಎಂ ಮಾಡಬೇಕೆಂದು ಅವರ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ” ಎನ್ನುವ ಮೂಲಕ ಪರೋಕ್ಷವಾಗಿ ಶಿವಕುಮಾರ್ ಸಿಎಂ ಆಗಬೇಕೆಂಬ ಒಲವು ತೋರಿಸಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X