ಹರಿಯಾಣದಲ್ಲಿ ದಲಿತರಿಗೆ ಬಹಿಷ್ಕಾರ: ಮಾಜಿ ಡಿಜಿಪಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

Date:

Advertisements

ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್ ಮತ್ತು ಕಮಲೇಂದ್ರ ಪ್ರಸಾದ್ ಅವರು ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಯನ್ನು ನಡೆಸುವಂತೆ ಮತ್ತು ಪ್ರಸ್ತುತ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು

Advertisements

2017ರಲ್ಲಿ ದಲಿತರಿಗೆ ಸಾಮಾಜಿಕ ಬಹಿಷ್ಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಥಿತಿಗತಿ ಮಾತ್ರವಲ್ಲದೆ, ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಪೀಠವು ಇಬ್ಬರು ಮಾಜಿ ಡಿಜಿಪಿಗಳಿಗೆ ಸೂಚಿಸಿದೆ.

ಇತ್ತೀಚಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. 2017ರ ಆ.20ರಂದು ಈ ಕುರಿತು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ. ಪ್ರಕರಣದ ಏಳು ಆರೋಪಿಗಳ ಪೈಕಿ 6 ಮಂದಿಗೆ ಹರಿಯಾಣ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X