ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ವಾಷಿಂಗ್ಟನ್‌ ಸುಂದರ್‌ ದಾಳಿಗೆ ಕಿವೀಸ್‌ ಧೂಳೀಪಟ

Date:

Advertisements

ಸ್ಪಿನ್ನರ್‌ ವಾಷಿಂಗ್ಟನ್‌ ಸುಂದರ್‌ ದಾಳಿಗೆ ಸಿಲುಕಿದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್‌ ಆಗಿದೆ.

ಭಾರತದ ವಿರುದ್ದ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 79.1 ಓವರ್‌ಗಳಲ್ಲಿ 259 ರನ್‌ಗಳಿಗೆ ಸರ್ವಪತನ ಕಂಡಿತು. ಸ್ಪಿನ್ನರ್‌ಗಳಾದ ವಾಷಿಂಗ್ಟನ್‌ ಸುಂದರ್‌ 59/7 ಹಾಗೂ ಆರ್‌ ಅಶ್ವಿನ್‌ 64/2 ವಿಕೆಟ್ ಕಬಳಿಸುವ ಮೂಲಕ ಪ್ರವಾಸಿ ತಂಡವನ್ನು 300 ರನ್‌ಗಳಿಗಿಂತ ಒಳಗೆ ಕಟ್ಟಿಹಾಕಿದರು.

ನ್ಯೂಜಿಲೆಂಡ್‌ ಪರ ಡೆವೊನ್‌ ಕಾನ್ವೆ (76), ರಚಿನ್‌ ರವೀಂದ್ರ (65) ಹಾಗೂ ಮಿಷಲ್‌ ಸ್ಯಾಟ್ನರ್‌ (33) ಮಾತ್ರ ಗೌರವಾನ್ವಿತ ಮೊತ್ತ ಗಳಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್‌ಮನ್‌ಗಳ್ಯಾರು 20ರ ಗಡಿ ದಾಟಲಿಲ್ಲ.

Advertisements

ಹೊಸ ದಾಖಲೆ ನಿರ್ಮಿಸಿದ ಅಶ್ವಿನ್

ಈ ಪಂದ್ಯದಲ್ಲಿ ಸ್ಪಿನ್ನರ್ ಆರ್‌ ಅಶ್ವಿನ್ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೊದಲು ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 78 ಇನಿಂಗ್ಸ್​ಗಳಲ್ಲಿ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ 189 ವಿಕೆಟ್ ಕಬಳಿಸಿ ಅಗ್ರಸ್ಥಾನಕ್ಕೇರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X