ಧಾರವಾಡ | ಸಾಧನೆ ಹಾದಿಯಲ್ಲಿ ಸಮಸ್ಯೆಗಳು ಬರುವುದು ಸಹಜ: ಜಿಲ್ಲಾಧಿಕಾರಿ ದಿವ್ಯಪ್ರಭು

Date:

Advertisements

ಸಾಧನೆಗೆ ಗುರಿ ಅತಿ ಮುಖ್ಯವಾಗುತ್ತದೆ, ಸಾಧನೆಯ ಸಮಯದಲ್ಲಿ ಸಮಸ್ಯೆ ಬರುವುದು ಸಹಜ. ಗುರಿಯು ಅಚಲವಾದರೆ ಅಸಾಧಾರಣ ಸಾಧನೆ ಸಾಧ್ಯ. ನಿಗದಿತ ಅವಧಿಯ ಪರಿಶ್ರಮವು ಶಾಶ್ವತವಾದ ಸಿಹಿಫಲ ನೀಡುವುದು. ಸಮಸ್ಯೆಗೆ ಕುಂದಿದರೆ ಸಾಧನೆ ಸಾಧ್ಯವಿಲ್ಲ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ನಗರದ ಅಂಜುಮನ್ ಕಲಾವಿಜ್ಞಾನ ಹಾಗೂ ಸ್ನಾತಕೋತ್ತರ ಮಹಾವಿದ್ಯಾಲಯ, ಮಹಿಳಾ ಸಬಲೀಕರಣ ಕೋಶ ಹಾಗೂ ಇತಿಹಾಸ ವಿಭಾಗ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ “ಕಿತ್ತೂರು ರಾಣಿ ಚನ್ನಮ್ಮ 19ನೇ ಶತಮಾನದ ಪೌರಾಣಿಕ ರಾಣಿ”, ಎಂಬ ವಿಚಾರ ಸಂಕೀರ್ಣದ ಅತಿಥಿಯಾಗಿ ಆಗಮಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಸ್ತ್ರೀಯರಿಗೆ ಮುಕ್ತ ಅವಕಾಶ ನೀಡಿದಾಗ ಪ್ರತಿಭೆ ಹೊರಬರಲು ಸಾಧ್ಯ. ಅದೇ ರೀತಿ ಮಾನಸಿಕ ಚಂಚಲತೆಯಿಂದ ಮುಕ್ತರಾಗಬೇಕು. ಹಾಗೂ ಮಹಿಳೆ ಸ್ವಯಂ ಅರಿವು ಬೆಳೆಸಿಕೊಳ್ಳುವುದು ಅತಿ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಜುಮನ್ ಸಂಸ್ಥೆ ಉಪಾಧ್ಯಕ್ಷ ಬಶೀರ್ ಅಹಮದ್ ಜಾಗೀರದಾರ ರಾಣಿ ಚೆನ್ನಮ್ಮ ಸಾಧನೆಯನ್ನು ಪ್ರಶಂಶಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ. ಎಸ್. ಎ. ಸರ್ಗಿರೋ, ಖಜಾಂಚಿ ಮಹಮ್ಮದ್ ರಫಿಕ್ ಶಿರಹಟ್ಟಿ, ಪ್ರಾಚಾರ್ಯ ಡಾ. ಎನ್. ಎಂ‌ ಮಕಾಂದಾರ್ ಹಾಗೂ ಐ. ಕ್ಯೂ. ಏ. ಸಿ ಸಂಯೋಜಕ ಡಾ. ಎನ್.ಬಿ ನಲತವಾಡ, ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ.ಮಂಜುಳಾ ಎಲಿಗಾರ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

Advertisements

ಇದನ್ನು ಓದಿದ್ದೀರಾ? ಹೊಸ ಪುಸ್ತಕ | ಮಾನವೀಯತೆಯ ಉಳಿವಿಗೆ ಪ್ರತಿರೋಧದ ದನಿ ʼಸ್ವಾಭಿಮಾನದ ಗತ್ತಿನ್ಯಾಗʼ

ಕಾರ್ಯಕ್ರಮದಲ್ಲಿ ಬಿತ್ತಿ ಚಿತ್ರ ಸ್ಪರ್ಧೆ ಏರ್ಪಡಿಸಿದ್ದರು. ಪ್ರೊ. ಆಸ್ಮಾ ನದಾಫ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ರಾಣಿ ಚೆನ್ನಮ್ಮಳ ಕಿರು ನಾಟಕದ ಮೂಲಕ ಆರಂಭಿಸಿದರು. ಕುಮಾರಿ ಸ್ವಾಲೆಹ, ಕುರಾನ ಪಠಿಸಿದರು. ಕುಮಾರ್ ಪ್ರವೀಣ್ ಲಮಾಣಿ ಭಗವದ್ಗೀತೆಯ ಶ್ಲೋಕವನ್ನು ಪಠಿಸಿದರು. ಇಂಗ್ಲಿಷ್ ವಿಭಾಗದ ಡಾ. ಆಸ್ಮಾನಾಜ್ ಬಳ್ಳಾರಿ ಅತಿಥಿಗಳ ಪರಿಚಯಿಸಿ ಸ್ವಾಗತಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸೈಯದ್ ತಾಜುನ್ನೀಸಾ ನಿರೂಪಿಸಿದರು. ಖೈರುದ್ದೀನ್ ಶೇಕ್, ಯಾಸಿನ ಹಾವೇರಿ ಪೇಟ್, ನಜೀರ್ ಬಲಬಟ್ಟಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X