ಉಡುಪಿ‌ | ಅಂಬಲಪಾಡಿ ಹೆದ್ದಾರಿಯಲ್ಲಿ ಬೈಕ್ -ಲಾರಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

Date:

Advertisements

ಉಡುಪಿ‌ ನಗರದ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮಾಹಿತಿ ತಿಳಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ, ತನ್ನ ಜೀಪಿನಲ್ಲಿಯೇ ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸುವ ಮೂಲಕ ಬೈಕ್ ಸವಾರರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಬೈಕ್ ಚಲಾಯಿಸುತ್ತಿದ್ದ ನಿಖಿಲ್ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ, ಸಹ ಸವಾರ ಸಂದೀಪ್‌ಗೆ ಪ್ರಜ್ಞೆ ಮರಳಿದೆ. ಈ ಇಬ್ಬರೂ ಪಡುಬಿದ್ರೆ ನಿವಾಸಿಗಳಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Advertisements

ವಿರುದ್ಧ ದಿಕ್ಕಿನಲ್ಲೇ ಜೀಪ್ ಚಲಾವಣೆ

ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರನ್ನು ತಮ್ಮ ಜೀಪಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ವಿಶು ಶೆಟ್ಟಿ ಅವರು ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದಲೇ ವಾಹನ ಚಲಾಯಿಸಬೇಕಾಯಿತು.

ಅಬ್ಕೋ ಸ್ಟೀಲ್‌ನಿಂದ ಹೈಟೆಕ್ ಆಸ್ಪತ್ರೆಗೆ ಬರಬೇಕಾದರೆ ಸುಮಾರು 1 ಕಿ.ಮೀ.ದೂರದ ಬಲಾಯಿಪಾದೆಗೆ ಹೋಗಿಯೇ ವಾಹನವನ್ನು ತಿರುಗಿಸಿಕೊಂಡು ಬರಬೇಕಾದ ಪರಿಸ್ಥಿತಿಯಿದೆ. ಆದರೆ ಜೀವ ಉಳಿಸುವ ಈ ಗೋಲ್ಡನ್ ಹವರ್‌ನಲ್ಲಿ ಈ ರಿಸ್ಕ್ ತೆಗೆದುಕೊಳ್ಳಲು ಇಚ್ಚಿಸದ ವಿಶು ಶೆಟ್ಟಿ ಅವರು, ವಿರುದ್ಧ ದಿಕ್ಕಿನಲ್ಲಿಯೇ ಹೆಡ್‌ಲೈಟ್ ಹಾಕಿ ವಾಹನ ಚಲಾಯಿಸಿ ಗಾಯಾಳುಗಳ ಪ್ರಾಣ ರಕ್ಷಣೆ ಮಾಡುವ ಅಪಾಯಕಾರಿ ಪ್ರಯತ್ನ ನಡೆಸಿದ್ದಾರೆ.

ಸಾಮಾನ್ಯವಾಗಿ ರಕ್ತ ಸುರಿಯುತ್ತಿದ್ದರೆ ಗಾಯಾಳುಗಳ ನೆರವಿಗೆ ಖಾಸಗಿ ವಾಹನಗಳು ನೆರವಿಗೆ ಬರುವುದು ಕಡಿಮೆ. ಆದರೆ ವಿಶು ಶೆಟ್ಟಿ ಅವರು ಇದನ್ನು ಲೆಕ್ಕಿಸದೆ ನೈಜ ಅಪತ್ಭಾಂಧವನಾಗಿ ಮಾನವೀಯತೆ ಮೆರೆದಿರುವುದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಪ್ರಕರಣದ ಬಗ್ಗೆ ಉಡುಪಿ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X