ಬೆಂಗಳೂರು | ಹೊಟ್ಟೆಯಲ್ಲಿಟ್ಟುಕೊಂಡು ₹11 ಕೋಟಿ ಮೌಲ್ಯದ ಕೊಕೇನ್ ಕ್ಯಾಪ್ಸೂಲ್ ಸಾಗಿಸುತ್ತಿದ್ದ ನೈಜೀರಿಯನ್‌ ಬಂಧನ

Date:

Advertisements
  • ಇಥಿಯೋಪಿಯಾದಿಂದ ವಿಮಾನ ನಿಲ್ದಾಣಕ್ಕೆ ಬಂದ 40 ವರ್ಷದ ಆರೋಪಿ
  • ಆಹಾರವನ್ನು ಸೇವಿಸಲು ಹಿಂಜರಿದಾಗ ಪೊಲೀಸರಿಗೆ ಶಂಕಿತ ನೈಜೀರಿಯನ್ ವ್ಯಕ್ತಿ

ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹11 ಕೋಟಿ ಮೌಲ್ಯದ 1 ಕೆಜಿ ಕೊಕೇನ್ ಅನ್ನು ಕ್ಯಾಪ್ಸೂಲ್‌ಗಳ ಮೂಲಕ ನುಂಗಿ ಹೊಟ್ಟೆಯಲ್ಲಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ನೈಜೀರಿಯನ್ ವ್ಯಕ್ತಿಯನ್ನು ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

40 ವರ್ಷದ ಬಂಧಿತ ವ್ಯಕ್ತಿ ಇಥಿಯೋಪಿಯಾದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಏ. 28ರಂದು ಭಾರತದಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ವೀಸಾ ಪಡೆದುಕೊಂಡಿದ್ದ.

ವಿಮಾನ ನಿಲ್ದಾಣದ ತನಿಖಾಧಿಕಾರಿಗಳು ವಿದೇಶಿ ಪ್ರಯಾಣಿಕರ ಪ್ರೊಫೈಲ್ ಅನ್ನು ಪರಿಶೀಲನೆ ನಡೆಸುವ ವೇಳೆ, ಆತ ತನ್ನ ದೇಹವನ್ನು ಬಳಸಿಕೊಂಡು ಮಾದಕವಸ್ತು ಕಳ್ಳ ಸಾಗಿಸುತ್ತಿರಬಹುದು ಎಂದು ಆ ಆಫ್ರಿಕನ್ ವ್ಯಕ್ತಿಯ ಮೇಲೆ ಅನುಮಾನಗೊಂಡು, ತಡೆದು ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ. ತನಿಖಾಧಿಕಾರಿಗಳು ಅವನಿಗೆ ನೀರು ಮತ್ತು ಆಹಾರವನ್ನು ಸೇವಿಸಲು ನೀಡಿದ್ದಾರೆ.

Advertisements

ಶಂಕಿತ ವ್ಯಕ್ತಿ ನೀರು ಮತ್ತು ಆಹಾರವನ್ನು ಸೇವಿಸಲು ನಿರಾಕರಿಸಿದ. ಆಹಾರ ಸೇವಿಸಿದರೆ ತನ್ನ ದೇಹದೊಳಗಿನ ಡ್ರಗ್ ಕ್ಯಾಪ್ಸೂಲ್‌ಗಳು ಸಿಡಿದು ಮಾರಣಾಂತಿಕ ಪರಿಣಾಮ ಉಂಟುಮಾಡಬಹುದು ಎಂದು ಭಯಪಟ್ಟು ಆತ ಊಟ ಮಾಡಲು ನಿರಾಕರಿಸಿದ್ದ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್; ಮುಂದಿನ ‘ಡಿಜಿ-ಐಜಿಪಿ’ ಯಾರು?

ಶಂಕಿತನ ಗಾಬರಿ ಕಂಡು ಡಿಆರ್‌ಐ ತಂಡವು ವ್ಯಕ್ತಿ ಮಾದಕ ದ್ರವ್ಯವನ್ನು ಹೊಂದಿರಬಹುದು ಎಂದು ಖಚಿತಪಡಿಸಿಕೊಂಡಿತು. ಅವರು ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ದು ಎಕ್ಸ್-ರೇ ಮಾಡಿಸಿದರು. ಬಳಿಕ ಅವನ ಹೊಟ್ಟೆಯಲ್ಲಿ 64 ಕ್ಯಾಪ್ಸೂಲ್‌ಗಳು ಇರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಡಿಆರ್‌ಐ ನೈಜೀರಿಯನ್‌ ವ್ಯಕ್ತಿಯನ್ನು ಬಂಧಿಸಿ ರಿಮಾಂಡ್‌ಗೆ ಒಪ್ಪಿಸಿದ್ದು, ಇದೀಗ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X