ಕೊಡಗು | ಅಭಿವೃದ್ಧಿ ಮೂಲಕ ನಂಬಿಕೆ ಉಳಿಸಿಕೊಳ್ಳುವೆ: ಡಾ. ಮಂಥರ್‌ ಗೌಡ

Date:

Advertisements
  • ‘ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ’
  • ‘ಕಂದಾಯ ಇಲಾಖೆಯನ್ನು ದಲ್ಲಾಳಿ, ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ’

ಕ್ಷೇತ್ರದ ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ ಎಂದು ಕಾಂಗ್ರೆಸ್‌ನ ನೂತನ ಶಾಸಕ ಡಾ. ಮಂಥರ್‌ ಗೌಡ ಹೇಳಿದರು.

ಮಡಿಕೇರಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕೊಡಗಿನ ಮಡಿಕೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ, ಆರೋಗ್ಯ ಕ್ಷೇತ್ರದ ಸುಧಾರಣೆ, ಕಸ ವಿಲೇವಾರಿಗೆ ವೈಜ್ಞಾನಿಕ ರೂಪ, ನಗರದ ಅಭಿವೃದ್ದಿಗೆ ಕ್ರಿಯಾ ಯೋಜನೆ, ಕಂದಾಯ ಇಲಾಖೆಯನ್ನು ದಲ್ಲಾಳಿ ಮತ್ತು ಭ್ರಷ್ಟಾಚಾರ ಮುಕ್ತಗೊಳಿಸಲು ಕಠಿಣ ಕ್ರಮ ವಹಿಸಲಾಗುವುದು” ಎಂದರು.

“ಸೋಮವಾರಪೇಟೆಯ ಶತಮಾನೋತ್ಸವ ಭವನ, ಕುಶಾಲನಗರದ ಕಲಾಮಂದಿರ ಸೇರಿದಂತೆ ಇದುವರೆಗೆ ಕಾಮಗಾರಿ ನಡೆಯದೆ  ಅಪೂರ್ಣಗೊಂಡಿರುವ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗವುದು” ಎಂದು ತಿಳಿಸಿದರು.

Advertisements

“ಕೊಡಗಿನ ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಅಭಿವೃದ್ಧಿ ಕಾರ್ಯಗಳ ಮೂಲಕ ಉಳಿಸಿಕೊಳ್ಳುತ್ತೇನೆ” ಎಂದು  ಡಾ. ಮಂಥರ್ ಗೌಡ ಅಭಯ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್ ಎಸ್ ಚಂದ್ರಮೌಳಿ, ಕೆ ಪಿ ಚಂದ್ರಕಲಾ, ಟಿ ಪಿ ರಮೇಶ್, ಮುನೀರ್ ಅಹಮ್ಮದ್, ಬಿ ವೈ ರಾಜೇಶ್ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಪುತ್ತೂರಿನಲ್ಲಿ ಕಟೀಲ್, ಸದಾನಂದಗೌಡಗೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X