ತುರುವೇಕೆರೆ | ಮಳೆ ಆರ್ಭಟ : ಕೊಂಡಜ್ಜಿ ಕ್ರಾಸ್ – ಕಲ್ಲೂರ್ ಕ್ರಾಸ್ ರಸ್ತೆ ಬಂದ್

Date:

Advertisements

ತುರುವೇಕೆರೆ ತಾಲ್ಲೂಕಿನ ಹಲವಾರು ಕೆರೆಗಳು ಕೋಡಿ ಬಿದ್ದ ಪರಿಣಾಮ ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ರಾತ್ರಿ ಸುರಿದ ಮಳೆಗೆ ಮನೆ ಗೋಡೆ ಕುಸಿದಿರುವ ಘಟನೆಯೂ ವರದಿಯಾಗಿದೆ.

 ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಪಾರ್ವತಮ್ಮನವರ ವಾಸದ ಮನೆಯ ಒಂದು ಭಾಗದ ಗೋಡೆ ಬುಧವಾರ ರಾತ್ರಿ ಕುಸಿದು ಬಿದ್ದಿದೆ. ಅದೃಷ್ಠವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಧವಸ, ಧಾನ್ಯ ಸೇರಿದಂತೆ ಹಲವು ಪರಿಕರಗಳು ಹಾಳಾಗಿವೆ.

1000588435

 ತುರುವೇಕೆರೆ ಪಟ್ಟಣದ 13 ನೇ ವಾರ್ಡ್ ನಲ್ಲಿರಾಜಕಾಲುವೆ ಮುಚ್ಚಿರುವುದರಿಂದ ಮಳೆ ನೀರು ಇಲ್ಲಿನ ವೆಂಕಟೇಶ್, ಕೆಂಪೇಗೌಡ, ಶೈಲಮ್ಮ, ಮರಿಯಪ್ಪ ಸೇರಿದಂತೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಮನೆಯ ದಿನ ನಿತ್ಯದ ಪರಿಕರಗಳೆಲ್ಲ ಹಾನಿಯಾಗಿವೆ.

Advertisements

 ತಹಶೀಲ್ದಾರ್ ಎನ್.ಎ.ಕುಂಞಅಹಮದ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾ, ಸದಸ್ಯ ಅಂಜನ್ ಕುಮಾರ್, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಶಿರಸ್ತೆದಾರ್ ಸುನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ರಾಜಕಾಲುವೆಯ ಒತ್ತುವರಿ ತೆರವು ಮಾಡಿಸಿ, ಕಾಲುವೆ ನೀರು ಸರಾಗವಾಗಿ ಹೋಗುವಂತೆ ಮಾಡಿಸಿದರು.

 ಮನೆಯೊಳಗೆ ನೀರು ನುಗ್ಗಿ ತೊಂದರೆಯಾಗಿರುವ ಅಲ್ಲದೇ ಮನೆಯೊಳಗಿನ ನೆಲದಿಂದಲೇ ನೀರು ಜಿನುಗುತ್ತಿರುವ ಮನೆಗಳಲ್ಲಿ ವಾಸವಿರುವ ನಾಲ್ಕೖದು ಮನೆಗಳವರಿಗೆ ಶಾಲಾ ಕೊಠಡಿಯಲ್ಲಿ ತಾತ್ಕಾಲಿಕ ವಾಸಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಅವರೆಲ್ಲರಿಗೂ ಊಟೋಪಚಾರದ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂದು ತಹಸೀಲ್ದಾರ್ ಅಹಮದ್ ತಿಳಿಸಿದ್ದಾರೆ. 

1000588434

 ತಾಲ್ಲೂಕಿನ ಕೊಂಡಜ್ಜಿ ಕ್ರಾಸ್, ಸೊಪ್ಪನಹಳ್ಳಿ ಮಧ್ಯೆ ಕೊಂಡಜ್ಜಿ ಹಳ್ಳ ರಭಸವಾಗಿ ರಸ್ತೆ ಮೇಲೆ ಹರಿಯುತ್ತಿರುವುದರಿಂದ ದಂಡಿನಶಿವರ ಪೊಲೀಸರು ಮತ್ತು ಕೊಂಡಜ್ಜಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬ್ಯಾರಿಕೇಡ್ ಹಾಕಿಸಿ ರಸ್ತೆ ಬಂದ್ ಮಾಡಿಸಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಹಳ್ಳದಾಟುವಾಗ ಕಾರು ಕೊಚ್ಚಿ ಹೋಗಿ ಚಾಲಕ ಸಾವನ್ನಪ್ಪಿದ್ದರು. ಆದ ಕಾರಣ ಗೋರಾಘಟ್ಟ-ಕಲ್ಲೂರ್ ಕ್ರಾಸ್ ಭಾಗದ ಬಸ್ ಸೇರಿದಂತೆ ಇನ್ನಿತರ ವಾಹನಗಳ ಸಂಚಾರ ನಿಷೇಧಿಸಲಾಗಿದೆಂದು ತಿಳಿದುಬಂದಿದೆ.

 ಮಲ್ಲಾಘಟ್ಟ ಕೆರೆ ಕೋಡಿ ನೀರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸರು ಇಲ್ಲಿನ ರಸ್ತೆ ನಿರ್ಭಂದಿಸಿ ಬ್ಯಾರಿಕೇಡ್ ಹಾಕಿದ್ದಾರೆ. ಸಾರಿಗೇಹಳ್ಳಿ ಕೆರೆ ಕೋಡಿಯಲ್ಲಿ ನೀರು ಹೆಚ್ಚಾಗಿ ರಸ್ತೆ ಮೇಲೆ ಹರಿಯುತ್ತಿದೆ. 

1000588431

 ತುರುವೇಕೆರೆ ಪಟ್ಟಣದ ಮುನಿಯೂರು ಗೇಟ್ ಬಳಿಯ ಶಿಂಷಾ ನದಿ ತುಂಬಿ ಮುನಿಯೂರು ಗದ್ದೆ ಬಯಲಿನವರೆವಿಗೂ ನೀರು ಆವರಿಸಿಕೊಂಡು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದೆ. ಶಿಂಷಾ ನದಿ ರಸ್ತೆ ಸೇತುವೆ ಎರಡೂ ಕಡೆ ಯಾವುದೇ ತಡೆಗೋಡೆ ನಿರ್ಮಿಸದೇ ಇರುವ ಕಾರಣ ವಾಹನ ಸವಾರರು ಮತ್ತು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

 ತಾಲ್ಲೂಕಿನ ಜಡೆಯ ಕೆರೆ ತುಂಬಿದ್ದು ಬುಧವಾರ ರಾತ್ರಿ ಕೆರೆ ಏರಿ ಮಧ್ಯೆ ಬಿರುಕು ಉಂಟಾಗಿ ಇಡೀ ಕೆರೆಯೇ ಒಡೆದು ಹೋಗುವ ಸ್ಥಿತಿಯಲ್ಲಿದ್ದಾಗ ಗ್ರಾಮಸ್ಥರು ಹೇಮಾವತಿ ನಾಲಾ ಎಂಜಿಯರ್ ಗೆ ಮಾಹಿತಿ ತಿಳಿಸಿ ಜೆಸಿಬಿ ಮೂಲಕ ಕೋಡಿ ಒಡೆಸಿ ನೀರನ್ನು ಹೊರಗೆ ಬಿಡಿಸಿದರೆಂದು ತಿಳಿದುಬಂದಿದೆ.

ವರದಿ –  ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X