ಬೆಳಗಾವಿ | ಈ ದಿನ ಫಲಶೃತಿ: ಮಳೆಯಿಂದ ಹಾನಿಗೊಳಗಾಗಿದ್ದ ಮೆಕ್ಕೆಜೋಳ ಪ್ರದೇಶಕ್ಕೆ ಕೃಷಿ ಅಧಿಕಾರಿಗಳ ಭೇಟಿ

Date:

Advertisements

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮಕ್ಕೆ ಜೋಳವು ಹಲವು ದಿನಗಳಿಂದ ಸುರಿದ ಮಳೆಯಿಂದ ನಾಶವಾಗಿ ಮೊಳಕೆಯೊಡೆದಿತ್ತು. ಈ ಕುರಿತು ಈ ದಿನ.ಕಾಮ್ ರೈತರು ಮತ್ತು ಯರಗಟ್ಟಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಪ್ರಕಾಶ ಪಾಟಿಲ್ ಅವರನ್ನು ಸಂಪರ್ಕಿಸಿ ಅಕ್ಟೋಬರ್ 20ರಂದು ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಅಧಿಕಾರಿಗಳು ಹಾನಿಗೊಳಗಾದ ರೈತರ ತೋಟಗಳಿಗೆ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ರೈತರಾದ ರಾಮಪ್ಪ ಹಾರುಗೊಪ್ಪ ಎರಡು ಎಕರೆ ಭೂಮಿಯಲ್ಲಿ ಗೋವಿನ ಜೊಳ ಬೆಳೆದಿದ್ದು ತೆನೆ ಮುರಿದು ತೋಟದಲ್ಲಿ ರಾಶಿ ಮಾಡಲು ಹಾಕಲಾಗಿತ್ತು. ಆದರೆ ಅನಿರೀಕ್ಷಿತವಾಗಿ ಮಳೆ ಬಂದಿದ್ದರಿಂದ ತೆನೆಗಳು ಮಳೆಗೆ ಸಿಲುಕಿ ಮೊಳಕೆಯೊಡೆದು ನಾಶವಾಗಿತ್ತು.

ಈ ಕುರಿತು ಈ ದಿನ.ಕಾಮ್ ಯರಗಟ್ಟಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಪ್ರಕಾಶ್ ಪಾಟೀಲ್ ಇವರನ್ನು ಸಂಪರ್ಕಿಸಿ ಮಳೆಯಿಂದ ಹಾನಿಗೊಳಗಾದ ಮೆಕ್ಕೆಜೋಳದ ಕುರಿತು ಮಾಹಿತಿ ನೀಡಿ ರೈತರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಿ ಪರಿಹಾರ ನೀಡುವಂತೆ ವರದಿ ಮಾಡಿತ್ತು.

Advertisements

ಈ ದಿನ.ಕಾಮ್ ವರದಿಗೆ ಸ್ಪಂದಿಸಿರುವ ಅಧಿಕಾರಿಗಳು ವರದಿ ಮಾಡಿದ ನಂತರ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಯರಗಟ್ಟಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಪ್ರಕಾಶ ಪಾಟಿಲ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾನಿಗೊಳಗಾದ ರೈತರ ತೋಟಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ಈ ಕುರಿತು ವರದಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಶಿಗ್ಗಾಂವಿ | ಬಂಡಾಯ ಸಾರಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ಯಶಸ್ವಿ

ಈ ಕುರಿತು ಈ ದಿನ‌ ಕಾಮ್ ಜೊತೆ ಕರ್ನಾಟಕ ರಾಜ್ಯ ರೈತ ರ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ರಾದ ಸಿಂಧೂರ ತೆಗ್ಗಿ ಮಾತನಾಡಿ, “ಈ ದಿನ.ಕಾಮ್ ವರದಿ ಮಾಡಿದ ನಂತರ ಕೃಷಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿದ್ದು, ಪರಿಹಾರ ನೀಡುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ವರದಿ ಮಾಡಿ, ರೈತರ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X