ನರಸಿಂಹರಾಜಪುರ | ಸಾಗುವಾನಿ ಮರ ಕಳ್ಳತನ; ಆರು ಮಂದಿ ಆರೋಪಿಗಳ ಬಂಧನ

Date:

Advertisements

ಸಾಗುವಾನಿ ಮರ ಕಡಿದು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿ ಅಳೇಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತರ ಪೈಕಿ ಮಿಥುನ್ ಎಂ ಎಸ್ (27) ಹಾಗೂ ಕೃಷ್ಣ(36) ಎಂಬ ಇಬ್ಬರನ್ನೂ ಶುಕ್ರವಾರ ತಡರಾತ್ರಿಯೇ ಸಾಗುವಾನಿ ನೆಡುತೋಪಿನಲ್ಲಿಯೇ ಬಂಧಿಸಲಾಗಿತ್ತು. ಬಳಿಕ ನಾಲ್ವರನ್ನು ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಶನಿವಾರ ಬಂಧನಕ್ಕೊಳಗಾದ ಆರೋಪಿಗಳನ್ನು ಕೌಶಿಕ್, ಅಶ್ವಥ್, ರಿಷಿಕಾಂತ್, ಅಕ್ಷಯ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಬಾಳೆಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಇನ್ನಿಬ್ಬರು ಆರೋಪಿಗಳಾದ ನವೀನ್ ಆಚಾರಿ, ಆಶಿಕ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಪರಾರಿಯಾದವರು ಗಡಿಕಲ್ ನಿವಾಸಿಗಳೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisements

ಬಾಳೆಹೊನ್ನೂರು ಸಮೀಪ ಅಳೇಹಳ್ಳಿ ಗ್ರಾಮ, 8ನೇ ಮೈಲಿಕಲ್ಲು ವ್ಯಾಪ್ತಿಯ ಕೂಸ್ಕಲ್ ಮೀಸಲು ಅರಣ್ಯ ಪ್ರದೇಶ ಸಾಗುವಾನಿ ನೆಡುತೋಪಿನಲ್ಲಿ ಮಧ್ಯರಾತ್ರಿ ಎಂಟು ಜನ ಅಕ್ರಮವಾಗಿ ಐದು ತುಂಡು ಸಾಗುವಾನಿ ಮರ ಕಡಿದು ಸಾಗಿಸುತ್ತಿದ್ದರು.

ಅಕ್ರಮವಾಗಿ ಸಾಗುವಾನಿ ಮರ ಕಡಿದು, ಸಾಗಿಸುತ್ತಿರುವ ಸಮಯದಲ್ಲಿ ಇಬ್ಬರು ಆರೋಪಿಗಳನ್ನು ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು, ಚಿಕ್ಕಅಗ್ರಹಾರ ವಲಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ಮಧ್ಯರಾತ್ರಿಯಲ್ಲಿ ಅಕ್ರಮವಾಗಿ ಕಳ್ಳತನ ಮಾಡಿ ಬೆಲೆ ಬಾಳುವ ಸಾಗುವಾನಿ ಮರವನ್ನು ಎಂಟು ಜನ ಸೇರಿಕೊಂಡು ಮಹೇಂದ್ರ ಜೀತೊ ವಾಹನದಲ್ಲಿ ಸಾಗುವಾನಿ ಮರವನ್ನು ಸಾಗಿಸುತ್ತಿದ್ದರು. ಮಾಹಿತಿ ತಿಳಿದ ತಕ್ಷಣ ಕೂಡಲೇ ಆರೋಪಿಗಳನ್ನು ಬಂಧಿಸಿ ಸಾಗುವಾನಿ ಮರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿದ್ದೀರಾ:ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

“ಎಂಟು ಜನರಲ್ಲಿ ಆರು ಮಂದಿಯನ್ನು ಬಂಧಿಸಿದ್ದೇವೆ. ಇಬ್ಬರು ತಪ್ಪಿಸಿಕೊಂಡಿದ್ದಾರೆ. ಐದು ತುಂಡು ಸಾಗುವಾನಿ ಮರವನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಲಾಗಿದೆ” ಎಂದು ವಲಯ ಅರಣ್ಯಾಧಿಕಾರಿ ಆದರ್ಶ್‌ ಅವರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ವಲಯ ಅರಣ್ಯಾಧಿಕಾರಿ ಆದರ್ಶ್‌ ಎಂ. ಪಿ ಅವರ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿ ನಂದೀಶ ಹೆಚ್. ಬಿ, ರಂಗನಾಥ ಆರ್ ಅತಾಲಟ್ಟಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರತಾಪ್ ಆರ್, ರಂಗನಾಥ ಕೆ. ಹೆಚ್, ನಾಗರಾಜ ಎಂ. ಡಿ, ಲೋಹಿತ್, ಚಾಲಕ ನಾಗರಾಜ್ ಮತ್ತು ಪವನ್ ದಾಳಿಯ ವೇಳೆ ತಂಡಲ್ಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X