ಬಿಜೆಪಿ ಅವಧಿಯಲ್ಲಿ ನೇಮಕಗೊಂಡ ಪದಾಧಿಕಾರಿಗಳು ರಾಜೀನಾಮೆ ನೀಡಲಿ: ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಆಗ್ರಹ

Date:

Advertisements
  • ‘ವಜಾಗೊಳಿಸುವ ಆದೇಶದಿಂದ ತಪ್ಪಿಸಿಕೊಂಡ ಅಡ್ಡಂಡ ಕಾರ್ಯಪ್ಪ’
  • ‘ನಿಯಮಬಾಹಿರವಾಗಿ ಹಣಕಾಸು ಚಟುವಟಿಕೆ ಬಗ್ಗೆ ವಿಶೇಷ ತನಿಖೆ’

“ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಕಾರಣಗಳಿಗಾಗಿ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಪ್ರಾಧಿಕಾರ ಹಾಗೂ ಸಾಂಸ್ಕೃತಿಕ ಸಂಘಟಣೆಗಳಿಗೆ ನೇಮಕವಾದ ಬಿಜೆಪಿ ಪ್ರೇರಿತ ಕಾರ್ಯಕರ್ತರು ಮತ್ತು ಬಿಜೆಪಿ ಪರವಾದ ಸ್ವಯಂ ಘೋಷಿತ ವಿಚಾರವಾದಿಗಳು ಕೂಡಲೇ ಆಯಾ ಸಂಸ್ಥೆಗಳ ಅಧ್ಯಕ್ಷರ ಮತ್ತು ಸದಸ್ಯ ಸ್ಥಾನಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು” ಎಂದು ಮಾಜಿ ಎಂಎಲ್‌ಸಿ ಮತ್ತು ಕಾಂಗ್ರೆಸ್‌ ವಕ್ತಾರ ರಮೇಶ್‌ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕರ್ನಾಟಕದಲ್ಲಿ ಜನಾದೇಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿದೆ. ಬಿಜೆಪಿ ಮೂಲಕ ನೇಮಕಗೊಂಡಿರುವ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದರ ಮೂಲಕ ಹೊಸ ಸರ್ಕಾರ ಹೊಸ ನೇಮಕಾತಿ ಮಾಡಲು ಅನುವು ಮಾಡಿಕೊಡಬೇಕು” ಎಂದಿದ್ದಾರೆ.

“ಕೆಲವು ಅರೆ ನ್ಯಾಯಿಕ ಆಯೋಗ ಮತ್ತು ಪ್ರಾಧಿಕಾರಗಳಿಗೆ ಹಿಂದಿನ ಬಿಜೆಪಿ ಸರ್ಕಾರ ರಾಜಕೀಯ ನೇಮಕಾತಿಗಳನ್ನು ಮಾಡಿದ್ದು, ಆ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು ರಾಜೀನಾಮೆ ನೀಡದೇ ಹೋದಲ್ಲಿ, ಕಾಂಗ್ರೆಸ್ ಪಕ್ಷವು ನಿಯಮಾನುಸಾರ ಇಂತಹ ನೇಮಕಾತಿಗಳನ್ನು ರದ್ದುಪಡಿಸಿ ಹೊಸ ನೇಮಕಾತಿ ಮಾಡಲಿದೆ” ಎಂದು ತಿಳಿಸಿದ್ದಾರೆ.

Advertisements

ಕಿತ್ತಾಕುವುದನ್ನು ತಪ್ಪಿಸಿಕೊಂಡ ಅಡ್ಡಂಡ ಕಾರ್ಯಪ್ಪ

“ರಂಗಸಮಾಜದ ಶಿಫಾರಸ್ಸು ಇಲ್ಲದೆ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನೇಮಿಸಿದ್ದ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿರುವುದು ಸರಿಯಿದೆ. ರಂಗಾಯಣ ಸಂಸ್ಥೆಯನ್ನು ಮಲಿನಗೊಳಿಸಿ ಈ ಸಂಸ್ಥೆಯ ಮೂಲಕ ರಾಜ್ಯದ ಸಾಂಸ್ಕೃತಿಕ ಹಿರಿಮೆಗೆ ಕಳಂಕ ತಂದ ಆರೋಪ ಹೊತ್ತಿರುವ ಅಡ್ಡಂಡ ಕಾರ್ಯಪ್ಪ ಪಾಪ ಪ್ರಜ್ಞೆಯ ಕಾರಣಕ್ಕಾಗಿ ರಂಗಾಯಣ ಸಂಸ್ಥೆಗೆ ರಾಜೀನಾಮೆ ನೀಡಿ ಅವರನ್ನು ವಜಾಗೊಳಿಸುವ ಆದೇಶದಿಂದ ಅವರು ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಸರ್ಕಾರದ ಅಥವಾ ಅರೆ ಸರ್ಕಾರದ ಸಂಸ್ಥೆಗಳು ಮತ್ತು ಪ್ರಾಧಿಕಾರಗಳು ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ನಂತರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಮೇಲೂ ನಿಯಮ ಬಾಹಿರವಾಗಿ ಹಣಕಾಸು ಚಟುವಟಿಕೆ ನಿರ್ವಹಿಸಿದ್ದರೆ, ಇದರ ಮೇಲೆ ಹೊಸ ಸರ್ಕಾರವು ವಿಶೇಷ ತನಿಖೆ ನಡೆಸಲಿದೆ” ಎಂದು ಎಚ್ಚರಿಸಿದ್ದಾರೆ.

“ರಾಜ್ಯದಲ್ಲಿ ನೀತಿ ಸಂಹಿತೆ ಬಂದ ನಂತರ ಕೆಲವು ಪ್ರಾಧಿಕಾರಗಳು ಮತ್ತು ಅರೆ ನ್ಯಾಯಿಕ ಆಯೋಗಗಳು ನಿಯಮ ಮೀರಿ ಹಣಕಾಸು ನಿರ್ವಹಣೆ ಮಾಡಿರುವುದು ಕಾಂಗ್ರೆಸ್ ಪಕ್ಷದ ಗಮನಕ್ಕೆ ಬಂದಿರುತ್ತದೆ. ಇಂತಹ ಯಾವುದೇ ಅಕ್ರಮಗಳಲ್ಲಿ ಯಾವುದೇ ಅಧಿಕಾರಿ ಭಾಗಿಯಾಗಿದ್ದರೆ ಅವರ ಮೇಲೆ ನಿಯಮಾನುಸಾರ ನೂತನ ಸರ್ಕಾರ ಕ್ರಮ ಕೈಗೊಳ್ಳಲಿದೆ. ಕೆಲವು ಸಂಸ್ಥೆಗಳು ಹಿಂದಿನ ದಿನಾಂಕ ನಮೂದಿಸಿ ಬಿಲ್‍ಗಳನ್ನು ಪಾವತಿ ಮಾಡಿರುವುದು ಮತ್ತು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಹೊಸ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X