ಶಿವಮೊಗ್ಗ | ಟೋಲ್‌ಗೇಟ್ ನಿರ್ಮಾಣ: ಚೆನ್ನಕೊಪ್ಪ ಗ್ರಾಮಸ್ಥರಿಂದ ವಿರೋಧ

Date:

Advertisements

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್‌ಗೇಟ್ ನಿರ್ಮಿಸಲು ತಯಾರಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆ ಆನಂದಪುರ ಹೋಬಳಿಯ ಗಿಳಾಲಗುಂಡಿ ವ್ಯಾಪ್ತಿಯ ಚೆನ್ನಕೊಪ್ಪ ಗ್ರಾಮದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಚೆನ್ನಕೊಪ್ಪ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ರೈತರು ಹಾಗೂ ಜನಸಾಮಾನ್ಯರು ಭೂಮಿ ಮತ್ತು ಮನೆಗಳ ನಿರ್ಮಿಸಿ, ಬದುಕನ್ನು ರೂಪಿಸಿಕೊಂಡಿದ್ದಾರೆ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಕೃಷಿ ಭೂಮಿ ಬಿಟ್ಟರೆ ಬೇರೆ ಯಾವ ಭೂಮಿ ಇರುವುದಿಲ್ಲ ಎಂದು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡಿದ್ದಾರೆ.

ಈ ಟೋಲ್‌ಗೇಟ್ ನಿರ್ಮಾಣದಿಂದಾಗಿ ನಮ್ಮ ಬದುಕು ಅತಂತ್ರವಾಗುತ್ತದೆ. ಆದಷ್ಟು ಬೇಗ ಈ ಯೋಜನೆಯನ್ನು ರದ್ದುಗೊಳಿಸಿ ಟೋಲ್‌ಗೇಟ್ ಸ್ಥಳಾಂತರಿಸಿ ಬೇರೆಡೆ ನಿರ್ಮಿಸಿಕೊಳ್ಳಬೇಕು ಎಂದು ಚೆನ್ನಕೊಪ್ಪ ಗ್ರಾಮದ ಜನ ಆಚಾಪುರ ಗ್ರಾಮ ಪಂಚಾಯತಿ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರು.

Advertisements

ಇದನ್ನೂ ಓದಿದ್ದೀರಾ?: ಕಡೂರು | ನಾಪತ್ತೆಯಾಗಿದ್ದ ಎರಡು ವರ್ಷದ ಮಗು ತರೀಕೆರೆಯಲ್ಲಿ ಪತ್ತೆ

ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಖಲೀಮುಲ್ಲಾ , ಸದಸ್ಯರಾದ ಪುಷ್ಪ, ಮತ್ತು ಪ್ರಕಾಶ್ ಮನವಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಚೆನ್ನಕೊಪ್ಪದ ಗ್ರಾಮಸ್ಥರಾದ ಶಿವಕುಮಾರ್, ನೇತ್ರಾವತಿ ರಮೇಶ್, ರವಿ, ಲೋಹಿತ, ಲಚಿಕೇತ , ಶೇಖರಪ್ಪ, ಸನಾವುಲ್ಲ ಹಾಗೂ ಸಾಗರ ತಾಲೂಕು ಮಾಜಿ ಪಂಚಾಯತ್ ಸದಸ್ಯರಾದ ಹನುಮಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಅಮಿತ್ ಆರ್, ಆನಂದಪುರ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X