ಬೆಳಗಾವಿ | ಬಿಮ್ಸ್‌ನಲ್ಲಿ 3 ತಿಂಗಳಲ್ಲೇ 41 ಶಿಶುಗಳು ಸಾವು

Date:

Advertisements

ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯಾಗಿರುವ ಬಿಮ್ಸ್‌ನಲ್ಲಿ ಪ್ರತಿದಿನ 25ಕ್ಕೂ ಹೆಚ್ಚು ಹೆರಿಗೆಗಳು ಆಗುತ್ತವೆ. ಹೀಗಾಗಿ, ಬಿಮ್ಸ್‌ಗೆ ಶಿಶುಗಳು ಮತ್ತು ತಾಯಂದಿರ ಆರೋಗ್ಯಕ್ಕಾಗಿ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯವೂ ಹಲವು ವರ್ಷಗಳಿಮದ ಇದೆ. ಆದರೆ, ಹೆಚ್ಚಿನ ಸೌಲಭ್ಯಗಳು ಆಸ್ಪತ್ರೆಗೆ ದೊರೆತಿಲ್ಲ ಎಂಬ ಆರೋಪಗಳಿವೆ. ಈ ನಡುವೆ, ಮೂರೇ ತಿಂಗಳಲ್ಲಿ 41 ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಿಮ್ಸ್‌ ಆಸ್ಪತ್ರೆಯಲ್ಲಿ ಆಗಸ್ಟ್‌ನಲ್ಲಿ 12, ಸೆಪ್ಟಂಬರ್​ನಲ್ಲಿ 18 ಹಾಗೂ ಅಕ್ಟೋಬರ್​ನಲ್ಲಿ 11 ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿರುವ ಏರ್‌ ಕಂಪ್ರೆಸರ್ ಕೆಟ್ಟಿರುವುದೇ ಶಿಶುಗಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

Advertisements

ಆಸ್ಪತ್ರೆಯಲ್ಲಿ ಎರಡು ಏರ್ ಕಂಪ್ರೆಸರ್‌ಗಳಿವೆ. ಅವುಗಳಲ್ಲಿ ಒಂದು ಏರ್‌ ಕಂಪ್ರೆಸರ್‌ ಮೂರು ತಿಂಗಳ ಹಿಂದೆಯೇ ಕೆಟ್ಟಿದೆ. ಇನ್ನೂ ಅದನ್ನು ರಿಪೇರಿ ಮಾಡಿಲ್ಲ. ಪರಿಣಾಮ, ಶಿಶುಗಳಿಗೆ ಸರಿಯಾಗಿ ಆಮ್ಲಜನಕ ಪೂರೈಕೆಯಾಗದೆ, ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

“ಶಿಶುಗಳು ಸಾವನ್ನಪ್ಪಿರುವುದ ಸತ್ಯ. ಸಾವಿಗೆ ಕಾರಣಗಳೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಒಂದು ಏರ್‌ ಕಂಪ್ರೆಸರ್ ಕೆಟ್ಟಿದೆ. ಹೊಸ ಏರ್ ಕಂಪ್ರೆಸರ್ ಖರೀದಿಗೆ ಟೆಂಡರ್ ಕರೆಯಲಾಘಿದೆ. ಅವಧಿಪೂರ್ವ ಪ್ರಸವ, ಶಿಶುಗಳ ತೂಕ ಕಡಿಮೆ ಸೆರಿದಂತೆ ನಾನಾ ಕಾರಣಗಳಿಂದ ಮಕ್ಕಳು ಸಾವನ್ನಪ್ಪಿದ್ದಾರೆ” ಎಂದು ಬಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಅಶೋಕ ಶೆಟ್ಟಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X