ಕುಮಾರಸ್ವಾಮಿ ಆರೋಪ ಮಾಡೋದು ಬಿಟ್ಟು ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್

Date:

Advertisements

ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಪರವಾಗಿ ಡಿ.ಕೆ ಸುರೇಶ್ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ, ಚನ್ನಪಟ್ಟಣದ ತಿಟ್ಟಮಾರನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಸುರೇಶ್, “ಕುಮಾರಸ್ವಾಮಿ ಅವರು ಆರೋಪ ಮಾಡುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ. ದಿನ ನಿತ್ಯ ಕಾಂಗ್ರೆಸ್ ವಿರುದ್ಧ ದೂಷಣೆ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಬಸ್‌ಗಳನ್ನು ಸೀಜ್ ಮಾಡಿ ಎಸ್‌ಸಿಆರ್ ಹಾಕಿಸಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪವನ್ನು ಟೀಕಿಸಿದ ಸುರೇಶ್‌, “ಅವರು ಬಸ್‌ಗಳಲ್ಲಿ ಜನರನ್ನು ಕರೆ ತಂದಿದ್ದರೆ, ಅದಕ್ಕೆ ಲೆಕ್ಕ ಕೊಡಬೇಕು. ಅದಕ್ಕಾಗಿ ಅನುಮತಿ ಪಡೆಯಬೇಕು ಎಂಬ ಸಾಮಾನ್ಯ ಜ್ಞಾನ ಇಲ್ಲವಾದರೆ, ಅವರು ಹೇಗೆ ಕೇಂದ್ರ ಸಚಿವರಾಗಿದ್ದಾರೆ. ಸಂವಿಧಾನದ ಬಗ್ಗೆ ಮೊದಲು ತಿಳಿದುಕೊಳ್ಳಲಿ. ಬಸ್‌ಗಳಿಗೂ ನಮಗೂ ಏನು ಸಂಬಂಧ?” ಎಂದಿದ್ದಾರೆ.

Advertisements

“ಕುಮಾರಸ್ವಾಮಿ ಅವರು ಅನೇಕ ಚುನಾವಣೆಗಳನ್ನು ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಬಗ್ಗೆ ಅವರಿಗೂ ಜ್ಞಾನವಿದೆ. ನೀತಿ ಸಂಹಿತೆ ಸಮಯದಲ್ಲಿ ಯಾರು ಯಾವ ಪಾತ್ರ ವಹಿಸುತ್ತಾರೆ, ಪ್ರಕ್ರಿಯೆ ಹೇಗಿರುತ್ತದೆ ಎಂದು ಎಲ್ಲರಿಗೂ ಗೊತ್ತಿದೆ. ನೀತಿ ಸಂಹಿತೆ ಉಲ್ಲಂಘನೆ ಆಗಿದ್ದರೆ ಅದು ಚುನಾವಣಾ ಅಧಿಕಾರಿಗಳಿಗೆ ಸಂಬಂಧಪಟ್ಟ ವಿಚಾರ. ಅದು ನಮಗೆ ಸಂಬಂಧಿಸುವುದಿಲ್ಲ” ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ.

“ಯೋಗೇಶ್ವರ್ 9 ಬಾರಿ ಚುನಾವಣೆ ಎದುರಿಸಿ ಐದು ಬಾರಿ ಶಾಸಕರಾಗಿದ್ದಾರೆ. ತಮ್ಮ ಮಗನನ್ನು ಚುನಾವಣೆಯಲ್ಲಿ ನಿಲ್ಲಿಸಲು ತಂತ್ರಗಾರಿಕೆ ಮಾಡಿ ಯೋಗೇಶ್ವರ್ ಪಕ್ಷ ತೊರೆಯುವಂತೆ ಕುಮಾರಸ್ವಾಮಿ ಮಾಡಿದ್ದಾರೆ. ಅವರೇ ಆಚೆ ಹಾಕಿ ಈಗ ಕಾಂಗ್ರೆಸ್ ಮೇಲೆ ದೂಷಣೆ ಮಾಡುತ್ತಿದ್ದಾರೆ” ಎಂದರು.

“ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಪಕ್ಷದಿಂದ ಯಾರೇ ಅಭ್ಯರ್ಥಿ ಮಾಡಿದರೂ ನಾನೇ ಅಭ್ಯರ್ಥಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈಗಲೂ ನಾವು ಅದನ್ನೇ ಹೇಳುತ್ತಿದ್ದೇವೆ. ಇಲ್ಲಿ ಯೋಗೇಶ್ವರ್ ಅಭ್ಯರ್ಥಿಯಲ್ಲ ಡಿ.ಕೆ ಶಿವಕುಮಾರ್ ಅಭ್ಯರ್ಥಿ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X