ಶಿವಮೊಗ್ಗ | ಮದ್ಯ ಸೇವಿಸಿ ವಾಹನ ಚಾಲನೆ; ₹10,000 ದಂಡ ವಸೂಲಿ ಮಾಡಿದ ಸಂಚಾರಿ ಪಿಎಸ್‌ಐ

Date:

Advertisements

ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪಿಎಸ್‌ಐ ಗರಿಷ್ಠ ₹10,000 ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ.

ನ್ಯಾಯಾಲಯದ ಸಂಖ್ಯೆ ಸಿಸಿ 6730/24ರ ಪ್ರಕರಣದಲ್ಲಿ ಅಕ್ಟೋಬರ್‌ 23ರಂದು ₹10,000 ದಂಡ ವಸೂಲಾತಿ ಮಾಡಲಾಗಿದ್ದು, ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ತಮ್ಮ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರನಿಗೆ ಭದ್ರಾವತಿ ಸಂಚಾರ ಪೊಲೀಸ್ ಠಾಣೆ ಪಿಎಸ್‌ಐ ₹10,000 ದಂಡ ವಿಧಿಸಿರುತ್ತಾರೆ” ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ..

Advertisements

ದೇಶದಲ್ಲಿ ಯಾವುದೇ ವ್ಯಕ್ತಿ ಮದ್ಯ ಸೇವಿಸಿ ವಾಹನ ಚಲಾವಣೆ ಮಾಡುತ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ 185ರಡಿ ದೂರು ದಾಖಲಿಸುತ್ತಾರೆ. ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನೂ ಕೂಡಾ ಕಸ್ಟಡಿಗೆ ತೆಗೆದುಕೊಳ್ಳಬಹುದು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪೊಲೀಸ್ ಇಲಾಖೆ, ಸಾರ್ವಜನಿಕರ ಬೇಡಿಕೆ ಈಡೇರಿಸುವಂತೆ ಗೃಹ ಸಚಿವರಿಗೆ ಮನವಿ

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 207ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲ ದಾಖಲೆಗಳನ್ನೂ ಕೂಡಾ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ₹2,000ದಿಂದ ₹10,000ದವರೆಗೆ ದಂಡ ವಿಧಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಂಚಾರಿ ಪೊಲೀಸ್ ಅಲ್ಲ, ಸಂಚಾರ ಪೊಲೀಸ್. ಟ್ವೀಟ್ ಅಲ್ಲಿ ಬಳಕೆ ಸರಿ ಇದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X