ಶಿವಮೊಗ್ಗ | ಪೊಲೀಸ್ ಸಮುದಾಯ ಭವನ ಉದ್ಘಾಟಿಸಿದ ಗೃಹ ಸಚಿವ ಪರಮೇಶ್ವರ್

Date:

Advertisements

ಶಿವಮೊಗ್ಗ ಜಿಲ್ಲೆಯ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನವನ್ನು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ಶನಿವಾರ ಉದ್ಘಾಟನೆ ಮಾಡಿದರು.

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ, ಡಿ.ಎ.ಆರ್ ಆವರಣದಲ್ಲಿ ₹3.75 ಕೋಟಿ ವೆಚ್ಚ ಭರಿಸಿ, 500 ಜನರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಹಾಗೂ ಊಟ ಮಾಡಲು ಜಾಗದ ವ್ಯವಸ್ಥೆ ಸೇರಿದಂತೆ ಸುಸಜ್ಜಿತ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ ಎಂದು ಸಚಿವ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಪೂರ್ವ ವಲಯ ಉಪ ಪೊಲೀಸ್ ನಿರೀಕ್ಷಕರಾದ ಬಿ.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವಿಮರ್ಶನಾ ಸಭೆಯನ್ನು ನಡೆಸಿದರು.

Advertisements

ಈ ವೇಳೆ ಮಾತನಾಡಿದ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್, “ಡ್ರಗ್ಸ್ ದಂಧೆ, ಸೈಬರ್ ಅಪರಾಧ ಪ್ರಕರಣಗಳು ನಿಯಂತ್ರಣಕ್ಕೆ ಪೊಲೀಸರು ಕಟಿಬದ್ಧರಾಗಬೇಕು. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸೂಚಿಸಿದರು.

ಇದನ್ನು ಓದಿದ್ದೀರಾ: ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್‌ ಶಾಸಕನಿಗೆ 7 ವರ್ಷ ಜೈಲು; ರದ್ದಾಗುತ್ತಾ ಶಾಸಕತ್ವ?

ಡಿಎಆರ್ ಪೊಲೀಸ್ ಭವನದ ಉದ್ಘಾಟನೆ ವೇಳೆ ಶಾಸಕ ಎಸ್.ಎನ್ ಚನ್ನಬಸಪ್ಪ, ಬಿ.ಕೆ ಸಂಗಮೇಶ್ವರ್, ಶಾಸಕ ಗೋಪಾಲ ಕೃಷ್ಣ ಬೇಳೂರು, ವಿಧಾನ ಪರಿಷತ್ ಹಾಲಿ ಶಾಸಕ ಬಲ್ಕಿಶ್ ಬಾನು, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಮಂಜುನಾಥ ಭಂಡಾರಿ,ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X