‘ನರಸತ್ತವರು’; ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

Date:

Advertisements

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ‘ಮಂಡ್ಯ ಜನರು ನರಸತ್ತವರು. ಮಂಡ್ಯದವರು ಕೈಗೆ ಬಳೆತೊಟ್ಟುಕೊಳ್ಳಬೇಡಿ’ ಎಂದು ಆಕ್ಷೇಪಾರ್ಹ, ಮಹಿಳಾ ನಿಂದನೆಯ ಹೇಳಿಕೆ ನೀಡಿ, ವಿವಾದ ಸೃಷ್ಟಿಸಿದ್ದಾರೆ.

ಬಿಜೆಪಿಯಲ್ಲಿರುವ ಶಿವರಾಮೇಗೌಡ ಬಿಜೆಪಿ ತೊರೆದಿದ್ದು, ಮರಳಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ. ತಾವು ಕಾಂಗ್ರೆಸ್‌ ಸೇರುವ ಬಗ್ಗೆ ನಾಗಮಂಗಲದಲ್ಲಿ ಮಾಧ್ಯಮಗೊಳೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿಯನ್ನು ರಾಮನಗರದಿಂದ ಓಡಿಸಿದ್ದಾರೆ. ಆದರೆ, ಮಂಡ್ಯದವರು ನರಸತ್ತವರು ಎಂದು ಕುಮಾರಸ್ವಾಮಿ ಇಲ್ಲಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

“ಮಂಡ್ಯ ಜಿಲ್ಲೆಯ ಮುಖಂಡರು ಎಚ್ಚೆತ್ತುಕೊಳ್ಳಬೇಕು. ಮಂಡ್ಯದಲ್ಲೂ ಗಂಡಸರಿದ್ದಾರೆ. ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Advertisements

“ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ‌. ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬೆಳೆಸಬೇಕೆಂದು ಆ ಪಕ್ಷ ಸೇರಿದ್ದೆ. ಆದರೆ, ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್‌ನವರು ಬಿಜೆಪಿಯ ಕತ್ತುಹಿಸುಕಿದ್ದಾರೆ. ಹೊಂದಾಣಿಕೆಯಿಂದ ಬಿಜೆಪಿ ಉಸಿರುಗಟ್ಟುತ್ತಿದೆ” ಎಂದು ಶಿವರಾಮೇಗೌಡ ಹೇಳಿದ್ದಾರೆ.

“ಕುಮಾರಸ್ವಾಮಿ ಎರಡು ಬಾರಿ ಲಾಟರಿಯಲ್ಲಿ ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿಯ ಗಾಡಿ ಮುಳುಗುತ್ತಿದ್ದು, ಅದನ್ನು ಮಂಡ್ಯ ಜನರು ಕೈ ಹಿಡಿದು ಎತ್ತಿದ್ದಾರೆ. ಸಚಿವರಾಗಿದ್ದರೂ ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ? ದೊಡ್ಡ ದೊಡ್ಡ ಕೈಗಾರಿಕಾ ತಂದು ಮಂಡ್ಯ ಜನರ ಋಣ ತೀರಿಸಬೇಕು” ಎಂದಿದ್ದಾರೆ.

2019ರ ಲೋಕಸಭಾ ಚುನಾವಣೆ ವೇಳೆಯೂ ನಾಲಿಗೆ ಹರಿಬಿಟ್ಟಿದ್ದ ಶಿವರಾಮೇಗೌಡ, ಮಾಜಿ ಸಂಸದೆ ಸುಮಲತಾ ಅವರನ್ನು ಮಾಯಾಂಗನೆ ಎಂದಿದ್ದರು. ಜನಾಕ್ರೋಶಕ್ಕೆ ಕಾರಣರಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X