ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡ ಸಂಜೀವ ಮಠಂದೂರು!

Date:

Advertisements

ಕರ್ನಾಟಕ ವಿಧನಸಭಾ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ  ಜಿಲ್ಲೆಯ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿತ್ತು.

ಪ್ರಖರ ಹಿಂದುತ್ವವಾದಿ ಅರುಣ್‌ ಕುಮಾರ್‌ ಪುತ್ತಿಲ ಮತ್ತು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರವರ ನಡುವಿನ ಪೈಪೋಟಿಯಿಂದಾಗಿ, ಕಾಂಗ್ರೆಸ್‌ನ ಅಶೋಕ್‌ ಕುಮಾರ್‌ ರೈ  ಗೆಲುವಿನ ಹಾದಿ ಸುಗಮವಾಗಿತ್ತು.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲಿಗರು ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮತ್ತಷ್ಟು ಜೋರಾಗಿದೆ.

Advertisements

ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಸೋಮವಾರ ಬ್ಯಾನರ್‌ ಒಂದು ಪ್ರತ್ಯಕ್ಷವಾಗಿದ್ದು, ಅದರಲ್ಲಿ ಮಾಜಿ ಸಿಎಂ ಸದಾನಂದ ಗೌಡ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಜೊತೆಗೆ ʻಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು’ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿತ್ತು.

ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರೋಧದ ಚರ್ಚೆ ಜೋರಾಗಿದೆ.

ಈ ಸುದ್ದಿ ಓದಿದ್ದೀರಾ?; ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ಬಿಜೆಪಿ ಪ್ರತಿಭಟನೆ

ರಾಜ್ಯ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ‌ ಕೋರಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ ಮಾಜಿ ಶಾಸಕ ಸಂಜೀವ ಮಠಂದೂರು, ಆಶಾ ತಿಮ್ಮಪ್ಪ ನೇತೃತ್ವದಲ್ಲಿ ತಾಲೂಕು ಆಡಳಿತ ಸೌಧದ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಮಠಂದೂರು, ರಾಜ್ಯ ಬಿಜೆಪಿ ನಾಯಕರ ತೇಜೋವಧೆ ಮಾಡಿದ ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.  

ಇದಕ್ಕೂ ಮೊದಲು ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ಬಿಜೆಪಿ ನಿಯೋಗ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದೆ.

ಬ್ಯಾನರ್‌ ತೆರವು, ಇಬ್ಬರ ಬಂಧನ

ಸರ್ಕಾರಿ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ನಗರಸಭೆಯಿಂದ ತೆರವುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.‌ ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X