ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಸುಳಿವು ನೀಡಿದವರಿಗೆ 5.5 ಕೋಟಿ ರೂ. ಬಹುಮಾನ: ಆಸ್ಟ್ರೇಲಿಯಾ ಘೋಷಣೆ

Date:

Advertisements

ಸುಮಾರು ಒಂದು ದಶಕದ ಹಿಂದೆ ನಡೆದ ಬೆಂಗಳೂರಿನ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ(5,57,31,700 ರೂ.) ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

ಪ್ರಭಾ ಅರುಣ್ ಕುಮಾರ್ ಅವರನ್ನು 2015ರ ಮಾರ್ಚ್ 7ರಂದು ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 41 ವರ್ಷದ ಪ್ರಭಾ ಅವರ ಕುತ್ತಿಗೆ ಇರಿದು ಹತ್ಯೆ ಮಾಡಲಾಗಿತ್ತು. ಘಟನೆ ನಡೆದು 10 ವರ್ಷಗಳಾದರೂ ಈವರೆಗೂ ಹಂತಕರ ಸುಳಿವು ದೊರಕಿಲ್ಲ. ಇದು ಆಸ್ಟ್ರೇಲಿಯಾ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

“ತನಿಖೆ ಸಂದರ್ಭದಲ್ಲಿ ಪೊಲೀಸ್ ಪಡೆಯ ಪತ್ತೇದಾರರು ಅನೇಕ ಹಂತದ ವಿಚಾರಣೆಗಳನ್ನು ನಡೆಸಿದ್ದಾರೆ. ಮಾಹಿತಿಗಾಗಿ ಸಾರ್ವಜನಿಕರ ನೆರವಿಗಾಗಿ ಹಲವು ಬಾರಿ ಮನವಿಗಳನ್ನು ಮಾಡಲಾಗಿದೆ. ಆದರೂ ಈ ಪ್ರಕರಣ ಬಗೆಹರಿಯದೆ ಉಳಿದಿದೆ” ಎಂದು ಎನ್‌ಎಸ್‌ಡಬ್ಲ್ಯೂ ಪೊಲೀಸರು ಹೇಳಿಕೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಬೆಂಗಳೂರಿನ ಮೈಂಡ್ ಟ್ರೀ ಕಂಪೆನಿಯ ಉದ್ಯೋಗಿಯಾಗಿದ್ದ ಪ್ರಭಾ ಅವರು ಕರ್ತವ್ಯದ ನಿಯೋಜನೆ ಮೇರೆಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದ ಪತಿ ಅರುಣ್ ಕುಮಾರ್ ಜತೆ ಫೋನ್‌ನಲ್ಲಿ ಮಾತನಾಡುತ್ತಾ ತೆರಳುತ್ತಿದ್ದ ಅವರಿಗೆ ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಮೂಡಿತ್ತು. ಅದನ್ನು ಪತಿ ಬಳಿ ಹೇಳಿದ್ದರು. ಅದೇ ವೇಳೆ ಅವರ ಮೇಲೆ ದಾಳಿ ನಡೆದಿತ್ತು. ಅವರು ವಾಸವಿದ್ದ ಸ್ಥಳದಿಂದ ಕೇವಲ 300 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿತ್ತು.

ಪತ್ನಿ ಶವವನ್ನು ವಾಪಸ್ ತರುವ ಸಲುವಾಗಿ ಅರುಣ್ ಕುಮಾರ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ ಜತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಹತ್ಯೆ ಮಾಡಿದ ವ್ಯಕ್ತಿ ಪ್ರಭಾ ಅವರಿಗೆ ಅಪರಿಚಿತನಾದರೂ, ಆಸ್ಟ್ರೇಲಿಯಾ ಅಥವಾ ಭಾರತದಲ್ಲಿರುವ ಅವರ ಪರಿಚಿತರೇ ಈ ಕೊಲೆ ಮಾಡಿಸಿರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ. ತನಿಖೆ ವೇಳೆ ಅನೇಕ ಪುರಾವೆಗಳು ದೊರಕಿದರೂ, ಹಂತಕರ ಬಂಧನಕ್ಕೆ ಅಗತ್ಯವಾದ ಪ್ರಬಲ ಸಾಕ್ಷ್ಯ ಅಥವಾ ಸುಳಿವು ಈವರೆಗೂ ಲಭ್ಯವಾಗಿಲ್ಲ.

ಪ್ರಭಾ ಅವರು ಮನೆ ಸಮೀಪದ ಉದ್ಯಾನದಲ್ಲಿ ನಡೆದುಕೊಂಡು ಬರುವುದನ್ನು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಸೆರೆಹಿಡಿದಿದ್ದವು. ಆದರೆ ಅವರನ್ನು ಹಿಂಬಾಲಿಸುತ್ತಿದ್ದವರು ಯಾರು ಎನ್ನುವುದು ಈವರೆಗೂ ಸ್ಪಷ್ಟವಾಗಿಲ್ಲ. ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದರೂ ಪ್ರಯೋಜನವಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X