ಗಂಭೀರ್‌ ಜೊತೆಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

Date:

Advertisements

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಗಾಗಿ ತೆರಳಲಿದ್ದು, ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್​ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ.

ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಿವಿಎಸ್​ ಲಕ್ಷ್ಮಣ್ ಅವರೊಂದಿಗೆ ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾನಿಟ್ಕರ್ ಮತ್ತು ಸುಭದೀಪ್ ಘೋಷ್ ಅವರು ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ ಎಂದು ತಿಳಿದು ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಚೆಂಡು ವಿರೂಪ ಪ್ರಕರಣ: ಡೇವಿಡ್ ವಾರ್ನರ್ ಮೇಲಿನ ನಿಷೇಧ ರದ್ದು

ಈ ಹಿಂದೆ ಕೂಡ ವಿವಿಎಸ್​ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಎನ್​ಸಿಎ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರೆದಿರುವ ಲಕ್ಷ್ಮಣ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ತಂಡದ ಕೋಚಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಭಾರತ ಟಿ20 ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

ಸರಣಿಯ ವೇಳಾಪಟ್ಟಿ
1ನೇ ಟಿ20, ನವೆಂಬರ್ 8, 2024, ರಾತ್ರಿ 8:30, ಡರ್ಬನ್
2ನೇ ಟಿ20, ನವೆಂಬರ್ 10, 2024, ರಾತ್ರಿ 8:30, ರಾತ್ರಿ ಗ್ಕೆಬರ್ಹಾ
3ನೇ ಟಿ20, ನವೆಂಬರ್ 13, 2024, ರಾತ್ರಿ 8:30, ಸೆಂಚುರಿಯನ್
4ನೇ ಟಿ20, ನವೆಂಬರ್ 15, 2024, ರಾತ್ರಿ 8:30, ಜೋಹಾನ್ಸ್‌ಬರ್ಗ್

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X