‘ಖಾಸಗಿತನದ ಹಕ್ಕು’ ಅಮೂಲ್ಯ ತೀರ್ಪಿನ ಅರ್ಜಿದಾರ ಕರ್ನಾಟಕದ ಹೆಮ್ಮೆಯ ನ್ಯಾ.ಕೆ ಎಸ್ ಪುಟ್ಟಸ್ವಾಮಿ ನಿಧನ

Date:

Advertisements

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎಸ್ ಪುಟ್ಟಸ್ವಾಮಿ ಅವರು ಸೋಮವಾರ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ‘ಆಧಾರ್’ ಯೋಜನೆಯನ್ನು ಸಂವಿಧಾನದ 21ನೇ ವಿಧಿಯಡಿ ಪ್ರಶ್ನಿಸಿದ ಮೊದಲಿಗರು ಎಂದೇ ಪ್ರಸಿದ್ಧರು. ಆಧಾರ್‌ ಯೋಜನೆಯ ಸಿಂಧುತ್ವ ಪ್ರಶ್ನಿಸಿ 2012ರಲ್ಲಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಾಗರಿಕರ ಖಾಸಗಿತನದ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು ಸುಪ್ರೀಂ ಪೀಠ ತೀರ್ಪು ನೀಡಿತ್ತು. ಆದರೆ ಆಧಾರ್‌ ಯೋಜನೆಯನ್ನು ಅದು ಎತ್ತಿ ಹಿಡಿಯಿತು.

ವಕೀಲರಾಗಿ 1952 ರಲ್ಲಿ ನೋಂದಾಯಿಸಿಕೊಂಡ ಅವರು ನವೆಂಬರ್ 1977ರಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಹೈಕೋರ್ಟ್‌ನಲ್ಲಿ 1986ರವರೆಗೆ ಸೇವೆ ಸಲ್ಲಿಸಿದ ಅವರು ನಿವೃತ್ತಿ ಬಳಿಕ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದರು.

Advertisements

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X