ದೆಹಲಿಯತ್ತ ಡಿಕೆಶಿ: ಯಾರಾಗ್ತಾರೆ ಮುಖ್ಯಮಂತ್ರಿ?

Date:

Advertisements

ರಾಜ್ಯ ಮುಖ್ಯಮಂತ್ರಿ ಯಾರು? ಎಂಬ ವಿಚಾರ ಜಟಿಲವಾಗಿದೆ. ಭಾನುವಾರ ಕಾಂಗ್ರೆಸ್‌ ಶಾಸಕರ ಸಭೆ ನಡೆದಿದ್ದು, ಎಲ್ಲರೂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಯಾರು ಎಂಬ ನಿರ್ಣಯವನ್ನು ಹೈಕಮಾಂಡ್‌ಗೆ ಬಿಟ್ಟಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ಗೆ ಸೋಮವಾರ ಬುಲಾವ್ ಹೊರಡಿಸಿತ್ತು. ಸಿದ್ದರಾಮಯ್ಯ ನಿನ್ನೆ ಮಧ್ಯಾಹ್ನವೇ ದೆಹಲಿಗೆ ತೆರಳಿದ್ದಾರೆ. ಅನಾರೋಗ್ಯದ ನೆಪ ಹೇಳಿದ ಡಿ.ಕೆ ಶಿವಕುಮಾರ್ ತಮ್ಮ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದರು. ಅವರು ಇಂದು (ಮಂಗಳವಾರ) ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಇದೇ ವೇಳೆ, ಸೋಮವಾರ ಸೋನಿಯಾ ಗಾಂಧಿ ಅವರೂ ಕೂಡ ದೆಹಲಿಯಲ್ಲಿರಲಿಲ್ಲ. ಅವರು ಶಿಮ್ಲಾಗೆ ತೆರಳಿದ್ದರು. ಇಂದು ಅವರೂ ಕೂಡ ದೆಹಲಿಗೆ ಮರಳಲಿದ್ದಾರೆ. ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಸೋಮವಾರದ ದೆಹಲಿ ಪ್ರಯಾಣವನ್ನು ರದ್ದುಗೊಳಿಸಿದ್ದಾಗಿಯೂ ಶಿವಕುಮಾರ್ ಹೇಳಿಕೊಂಡಿದ್ದಾರೆ.

Advertisements

“ಹೆಚ್ಚು ಶಾಸಕರು ಯಾರಿಗೆ ಬೆಂಬಲ ನೀಡುತ್ತಾರೆ ಎಂಬುದು ಮುಖ್ಯವಲ್ಲ. ನಾನು ಪಕ್ಷದ ಅಧ್ಯಕ್ಷ. ನನ್ನ ಅಧ್ಯಕ್ಷತೆಯಲ್ಲಿ 135 ಶಾಸಕರು ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ನಿರ್ಧಾರದ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್ ಗೆಲುವಿನಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಅಪ್ರತಿಮ ಪಾತ್ರ

ಶಿವಕುಮಾರ್ ದೆಹಲಿ ಪ್ರಯಾಣವನ್ನು ನಿನ್ನೆ ರದ್ದುಗೊಳಿಸಿದ್ದರೂ, ಅವರ ಸಹೋದರ ಡಿ.ಕೆ ಸುರೇಶ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ.

ಸಿದ್ದರಾಮಯ್ಯ ಅವರು ದೆಹಲಿಯಲ್ಲಿಯೇ ಉಳಿದಿದ್ದಾರೆ. ಶಿವಕುಮಾರ್ ಇಂದು ದೆಹಲಿಗೆ ತೆರಳಲಿದ್ದಾರೆ. ಆ ವೇಳೆಗೆ ಸೋನಿಯಾ ಗಾಂಧಿ ಅವರೂ ದೆಹಲಿಗೆ ಮರಳಲಿದ್ದು, ಖರ್ಗೆ ಮತ್ತು ಸೋನಿಯಾ ನೇತೃತ್ವದಲ್ಲಿ ಈ ಇಬ್ಬರು ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X