ತುರುವೇಕೆರೆ | ಸಿಡಿಲಿಗೆ ಬಲಿಯಾದ ಜಾನುವಾರುಗಳಿಗೆ ಪರಿಹಾರ ವಿತರಣೆ

Date:

Advertisements

 ತುರುವೇಕೆರೆ ತಾಲೂಕಿನಲ್ಲಿ ಕಳೆದ ಐದಾರು ದಿನಗಳ ಹಿಂದೆಯಷ್ಟೇ ಸಿಡಿಲಿಗೆ ಬಲಿಯಾಗಿದ್ದ 14 ಕುರಿ ಮತ್ತು ಮೇಕೆ ಹಾಗೂ ಒಂದು ಹಸುವಿನ ಮಾಲೀಕರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾದ ಪರಿಹಾರ ಆದೇಶ ಪತ್ರವನ್ನು ವಿತರಣೆ ಮಾಡಿದರು.

 ತುರುವೇಕೆರೆ ತಾಲೂಕಿನ ರಾಮಸಾಗರದಲ್ಲಿ ಗೋವಿಂದರಾಜು, ವರದಯ್ಯ, ದಾಸಪ್ಪ, ರಮೇಶ್ ಮತ್ತು ಲಕ್ಷ್ಮಣ ಎಂಬುವವರಿಗೆ ಸೇರಿದ 4 ಕುರಿಗಳು ಮತ್ತು 10 ಮೇಕೆಗಳು ಸಿಡಿಲಿಗೆ ಬಲಿಯಾಗಿದ್ದವು. ತಲಾ ಒಂದಕ್ಕೆ 4 ಸಾವಿರ ರೂಗಳಂತೆ ಪರಿಹಾರ ಧನ ನೀಡಲಾಯಿತು. 

 ತೋವಿನಕಟ್ಟೆಯಲ್ಲಿ ವೇಣುಗೋಪಾಲ್ ಎಂಬುವವರಿಗೆ ಸೇರಿದ ಹಸುವೊಂದು ಸಿಡಿಲಿಗೆ ಬಲಿಯಾಗಿತ್ತು. ಹಾಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೀಡಲಾದ 37.500 ರೂಗಳ ಪರಿಹಾರದ ಆದೇಶ ಪತ್ರವನ್ನು ಸಹ ಶಾಸಕ ಎಂ.ಟಿ.ಕೃಷ್ಣಪ್ಪ ಹಸುವಿನ ಮಾಲೀಕರಿಗೆ ವಿತರಣೆ ಮಾಡಿದರು. 

Advertisements

ಮಳೆಗಾಲದಲ್ಲಿ ಮಳೆ, ಗುಡುಗು ಮತ್ತು ಸಿಡಿಲಿಗೆ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ರೈತಾಪಿಗಳು ಜೀವನೋಪಾಯಕ್ಕಾಗಿ ಜಾನುವಾರುಗಳನ್ನು ಸಾಕಿರುತ್ತಾರೆ. ಇಂತಹ ಸಂಧರ್ಭದಲ್ಲಿ ಆಗುವ ಅನಾಹುತಗಳಿಗೆ ಸರ್ಕಾರ ಹೆಚ್ಚು ಪರಿಹಾರವನ್ನು ನೀಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸರ್ಕಾರಕ್ಕೆ ಆಗ್ರಹಿಸಿದರು.

ಕುರಿಗಳಿಗೆ ತಲಾ 10 ಸಾವಿರ, ಮೇಕೆಗಳಿಗೆ ತಲಾ 15 ಸಾವಿರ ಮತ್ತು ಹಸು ಸೇರಿದಂತೆ ಇತರೆ ಜಾನುವಾರುಗಳಿಗೆ 80 ಸಾವಿರ ರೂಗಳನ್ನು ಪರಿಹಾರವಾಗಿ ನೀಡಬೇಕೆಂದು ಸರ್ಕಾರಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ನೀಡಿದ್ದಾರೆ. 

 28 ಟಿವಿಕೆ 3 – ತುರುವೇಕೆರೆ ತಾಲೂಕಿನಲ್ಲಿ ಸಿಡಿಲಿಗೆ ಬಲಿಯಾದ ಜಾನುವಾರುಗಳ ಮಾಲೀಕರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಪರಿಹಾರದ ಆದೇಶ ಪತ್ರವನ್ನು ವಿತರಣೆ ಮಾಡಿದರು. 

 ಪಶು ಸಂಗೋಪನಾ ಇಲಾಖೆಯಿಂದ ತಲಾ ಒಂದು ಸಾವಿರ ರೂ ಪರಿಹಾರ ಧನ ನೀಡಲಾಗುವುದು ಎಂದು ತಾಲೂಕು ಪಶುಸಂಗೋಪನಾ ಇಲಾಖಾ ಸಹಾಯಕ ನಿರ್ದೇಶಕರಾದ ಡಾ.ರೇವಣಸಿದ್ದಪ್ಪ ತಿಳಿಸಿದರು. 

 ಇದೇ ಸಂಧರ್ಭದಲ್ಲಿ ತಹಸೀಲ್ದಾರ್ ಕುಂ ಇ ಅಹಮದ್, ಇಓ ಶಿವರಾಜಯ್ಯ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರವಿಕುಮಾರ್, ಜೆಡಿಎಸ್ ಮುಖಂಡ ಮಾದಿಹಳ್ಳಿ ಕಾಂತರಾಜ್ ಸೇರಿದಂತೆ ಹಲವರು ಇದ್ದರು.

ವರದಿ – ಎಸ್. ನಾಗಭೂಷಣ್

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X