ಮೂಡಿಗೆರೆ | ಸಮುದಾಯ ಭವನವನ್ನೇ ದಾಸ್ತಾನನ್ನಾಗಿಸಿಕೊಂಡು ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರ!

Date:

Advertisements

ಸಮುದಾಯ ಭವನವನ್ನೇ ಗುತ್ತಿಗೆದಾರರೊಬ್ಬರು ಕಾನೂನು ಬಾಹಿರವಾಗಿ ದಾಸ್ತಾನು ಕೇಂದ್ರವನ್ನಾಗಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಮಣ್ಣೀಕೆರೆ ಗ್ರಾಮದಲ್ಲಿ ನಡೆದಿದೆ.

Capture 12

ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡಲು ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಆದರೆ, ಮಣ್ಣೀಕೆರೆ ಗ್ರಾಮದಲ್ಲಿ ಕಳೆದ ಹತ್ತು ತಿಂಗಳಿಂದ ಗುತ್ತಿಗೆದಾರರೊಬ್ಬರು ಸಿಮೆಂಟ್, ಪೈಪುಗಳನ್ನು ಸಂಗ್ರಹಕ್ಕೆ ಬಳಸಿಕೊಂಡಿದ್ದಾರೆ ಎಂದು ಸ್ಥಳೀಯರು ದೂರು ನೀಡಿದ್ದಾರೆ.

ಸ್ಥಳೀಯ ಜನರ ಉಪಯೋಗಕ್ಕೆ ಸಮುದಾಯ ಭವನ ಇರುವುದು. ಅದನ್ನು ಗುತ್ತಿಗೆದಾರನೋರ್ವ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ಸುನಿಲ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

Advertisements

ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ಅವರಿಗೆ ಮಾಹಿತಿ ತಿಳಿಸಿದರೆ, ಬೇಜವಾಬ್ದಾರಿ ಉತ್ತರ ನೀಡುತ್ತಾರೆ ಎಂದು ಮಣ್ಣೀಕೆರೆ ಗ್ರಾಮದ ಗ್ರಾಮಸ್ಥರ ಆರೋಪವಾಗಿದೆ.

ಇದನ್ನೂ ಓದಿದ್ದೀರಾ? ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ: ಸಚಿವ ಸಂಪುಟ ತೀರ್ಮಾನ

ಮೇಲಧಿಕಾರಿಗಳಿಗೆ ದೂರು ನೀಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಂಡು ಅಕ್ರಮವಾಗಿ ಸಿಮೆಂಟ್ ಮತ್ತು ಪೈಪುಗಳನ್ನು ಸಂಗ್ರಹ ಮಾಡಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಿ ಸಮುದಾಯ ಭವನದಲ್ಲಿ ಸಂಗ್ರಹಿಸಿರುವ ಸಿಮೆಂಟ್ ಮೂಟೆಗಳನ್ನು ತೆರವು ಮಾಡಿ, ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮಣ್ಣೀಕೆರೆ ಗ್ರಾಮದ ಜನರು ಈ ದಿನ.ಕಾಮ್ ಮೂಲಕ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಕೇಳಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X