ಮಂಗಳೂರು | ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಮಾಧ್ಯಮ ರಂಗದ ಪ್ರಯತ್ನ ಮಾದರಿ: ಡಿಸಿ ಮುಲ್ಲೈ ಮುಗಿಲನ್

Date:

Advertisements

ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಅವರು ಮಂಗಳೂರು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್‌ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡುತ್ತಿದ್ದರು.

“ಮಾಧ್ಯಮಗಳು ಜನರ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲುವುದರ ಜೊತೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಜೊತೆ ಅಲ್ಲಿನ ಸ್ಥತ ಜನರ ಜೊತೆ ಸೇರಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮೀಣ ಭಾಗದಲ್ಲಿ ನಡೆಸುತ್ತಿರುವ ಗ್ರಾಮ ವಾಸ್ತವ್ಯದ ಮೂಲಕ ಅವರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿರುವುದು ಮತ್ತು ಆ ಸಮಸ್ಯೆ ಪರಿಹರಿಸಲು ಗ್ರಾಮದ ಜನರು ಜೊತೆ ಸೇರಿ ಮಾಡುತ್ತಿರುವ ಕೆಲಸ ತಾನು ಇತರ ಕಡೆ ನೋಡಿಲ್ಲ‌. ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕ” ಎಂದರು.

Advertisements
WhatsApp Image 2024 10 28 at 6.38.00 PM

ಇದೇ ಸಂದರ್ಭದಲ್ಲಿ ಕುತ್ಲೂರು ಗ್ರಾಮದ ಸಾಹಸ ಪ್ರವಾಸೋದ್ಯಮ ಸಾಕ್ಷ್ಯಚಿತ್ರದ ಮೂಲಕ ಪ್ರಶಸ್ತಿ ಪಡೆದ ಕುತ್ಲೂರು ಗ್ರಾಮದ ಪ್ರತಿನಿಧಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸನ್ಮಾನಿಸಿದರು.

ಸಮಾರಂಭದ ವೇದಿಕೆಯಲ್ಲಿ ಎಂಸಿಎಫ್‌ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಎಂಸಿಎಫ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸುತ್ತಾ, ಕುತ್ಲೂರು ಗ್ರಾಮಾಂತರ ಪ್ರದೇಶ ಸೇರಿದಂತೆ ಸಂಸ್ಥೆಯ ಸಿಎಸ್‌ಆರ್ ನಿಧಿಯ ವತಿಯಿಂದ ಸುಮಾರು 350 ಮಕ್ಕಳಿಗೆ ಈ ಬಾರಿ ಸಮವಸ್ತ್ರ ನೀಡಲು ಸಂತೋಷಪಡುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದಿರಾ? ಕರ್ನಾಟಕದ ಲಾರಿ ಚಾಲಕನಿಗೆ ಅಮಾನುಷ ಹಲ್ಲೆಗೈದ ತಮಿಳುನಾಡು ಟ್ರಾಫಿಕ್ ಪೊಲೀಸ್: ವಿಡಿಯೋ ವೈರಲ್

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಎಂಸಿಎಫ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿ, ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X