ರಾಯಚೂರು | ಜಿಲ್ಲೆಯಲ್ಲಿ ಕನ್ನಡ ನಾಮಫಲಕಗಳು ಪಸರಿಸಬೇಕು: ನಮ್ಮ ಕರ್ನಾಟಕ ಸೇನೆ ಒತ್ತಾಯ

Date:

Advertisements

ರಾಯಚೂರು ಜಿಲ್ಲೆಯ ವ್ಯಾಪಾರ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳನ್ನು ಶೇ. 70ರಷ್ಟು ಕನ್ನಡದಲ್ಲಿರಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ಜಿಲ್ಲೆಯಾದ್ಯಂತ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಸಂಸ್ಥೆಗಳು ಎಲ್ಲಾ ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಸೂಚಿಸಬೇಕು. ನಾಮಫಲಕಗಳಲ್ಲಿ ಶೇ.70 ರಷ್ಟು ಭಾಗ ಕನ್ನಡದಲ್ಲಿರತಕ್ಕದ್ದು ಉಳಿದ ಶೇ.30 ರಷ್ಟು ಭಾಗದಲ್ಲಿ ಇತರ ಭಾಷೆ ಬಳಸಬಹುದಾಗಿದೆ ಎಂಬುದು ಸರ್ಕಾರದ ಸುತ್ತೋಲೆಯಲ್ಲಿ ಆದೇಶಿಸಿದ್ದರೂ, ನಾಮಫಲಕಗಳಲ್ಲಿ ಕನ್ನಡ ಕಾಣಿಸುತ್ತಿಲ್ಲ ಎಂದು ಒತ್ತಾಯಿಸಿದರು.

ನಗರದಲ್ಲಿ ಜಿಲ್ಲಾಡಳಿತವು ಕನ್ನಡದ ಬಗ್ಗೆ ತಳೆದಿರುವ ನಿರ್ಲಕ್ಷ್ಯದಿಂದಾಗಿ ಅನ್ಯ ಭಾಷೆಗಳು ಬಹುಪಾಲು ನಾಮಫಲಕಗಳು ಆವರಿಸಿದ್ದು, ಎಲ್ಲಾ ಕಡೆ ಎದ್ದು ಕಾಣಿಸುತ್ತಿವೆ. ಆದ್ದರಿಂದ ಕೂಡಲೇ ನವೆಂಬರ್ 1ರೊಳಗಾಗಿ ಎಲ್ಲಾ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಸಂಸ್ಥೆಗಳಿಗೆ ತಿಳುವಳಿಕೆ ಪತ್ರ ಹೊರಡಿಸಿ ಕನ್ನಡ ನಾಮಫಲಕ ಕಾರ್ಯರೂಪಕ್ಕೆ ತರಬೇಕು ಹಾಗೂ ಖಡಕ್ ಸೂಚನೆ ಆದೇಶಿಸಬೇಕು ಎಂದು ಆಗ್ರಹಿಸಿದರು.

Advertisements

ನವೆಂಬರ್ 1ರಿಂದ ರಾಯಚೂರಿನ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ ನೀಡಬೇಕು ಹಾಗೂ ಜಿಲ್ಲೆಯ ಕನ್ನಡ ಪರ ಸಂಘಟನೆಗಳು ಕನ್ನಡ ಕಂಪನ್ನು ಪಸರಿಸುವ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕಾಗಿ ನೂರಾರು ಮರಕ್ಕೆ ಕೊಡಲಿ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ

ನವೆಂಬರ್ 1 ರಂದು ಶಾಲಾ ಮಕ್ಕಳಿಗೆ ರಜೆ ಘೋಷಿಸದೇ ಕನ್ನಡದ ಧ್ವಜಾರೋಹಣ ಮಾಡಿ ನಾಡಗೀತೆ ಹಾಡಿ ರಾಜ್ಯೋತ್ಸವ ಆಚರಣೆಯ ಇತಿಹಾಸವನ್ನು ಮಕ್ಕಳಿಗೆ ತಿಳಿಸಬೇಕೆಂದು ಎಲ್ಲಾ ಶಾಲೆಗಳಿಗೆ ಆದೇಶ ಹೊರಡಿಸಬೇಕು ಎಂದರು.

ಈ ವೇಳೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಕೊಂಡಪ್ಪ , ಎಂ ಎಸ್ ವೆಂಕಟೇಶ , ಮಹೇಶ್ ಪಾಟೀಲ್ , ರಾಜಶೇಖರ್ , ವೀರೇಶ್ ಎಲಿಗಾರ , ಇನ್ನಿತರರು ಹಾಜರಿದ್ದರು.

mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X