ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಿರುವ ರಸ್ತೆಯಲ್ಲಿ ಪಟಾಕಿ ಮಾರಾಟ ಮಾಡಲು ಕೊಟ್ಟಿರುವ ಜಾಗ ತೆರವುಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಎಂದು ಒತ್ತಾಯಿಸಿದೆ.
ಈ ಸಂಬಂಧ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳಿಗೆ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವತಿಯಿಂದ ಮನವಿ ಮಾಡಲಾಯಿತು.
ಸರಕಾರದ ನಿಯಮದ ಪ್ರಕಾರ ಸಿಡಿಮದ್ದುಗಳ ಮಾರಾಟ ಮಾಡಲು ಯಾವುದೇ ಜನ ಪ್ರದೇಶದಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಟಾಕಿ ಮಾಡುವ ನಿಯಮ ಇಲ್ಲದಿದ್ದರೂ ಸಹ ಸಕಲೇಶಪುರ ತಾಲೂಕಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಯ ಪಕ್ಕದಲ್ಲಿ ಪಟಾಕಿಯನ್ನು ಮಾರಾಟ ಮಾಡಲು ಸ್ಥಳವನ್ನು ನಿಗದಿಪಡಿಸಿರುವುದು ಸರಿಯಲ್ಲ ಎಂದು ಮುಖಂಡರು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರವು ಸಾರ್ವಜನಿಕರಿಗೆ ಪಟಾಕಿಯನ್ನು ಖರೀದಿಸಲು ಸ್ಥಳ ನಿಗದಿಪಡಿಸುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತಹ ಸ್ಥಳವನ್ನು ಗುರುತಿಸಬೇಕಾಗಿರುತ್ತದೆ. ಸಕಲೇಶಪುರ ತಾಲೂಕಿನಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಸ್ಥಳವು ರಾಷ್ಟ್ರೀಯ ಹೆದ್ದಾರಿ 75 ಕ್ಕೆ ಹೊಂದಿಕೊಂಡಿರುವುದರಿಂದ ಸಾರ್ವಜನಿಕ ಪಾದಚಾರಿಗಳಿಗೆ ತೊಂದರೆ ಆಗುತ್ತದೆ ಎಂದು ತಿಳಿಸಿದರು.
ಪಟಾಕಿ ಮಾರಾಟಕ್ಕೆ ಕೊಟ್ಟಿರುವ ಸ್ಥಳವು 100 ಮೀಟರ್ ಒಳಗೊಂಡಿರುವ ವಾಸವಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ವಾಸವಿ ಪ್ರೌಢಶಾಲೆ ಇರುವುದರಿಂದ ಸಾರ್ವಜನಿಕವಾಗಿ ತೊಂದರೆ ಆಗುತ್ತದೆ. ಪಟಾಕಿಯನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಜೀವನಕ್ಕೆ ಯಾವುದೇ ತೊಂದರೆಯಾಗದಂತೆ ಬದಲಿ ಸೂಕ್ತ ಸ್ಥಳವನ್ನು ನಿಗದಿಪಡಿಸಬೇಕು ಎಂದು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಅಧಿಕಾರಿಗಳಲ್ಲಿ ಮನವಿಯ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ: ತೆಲಂಗಾಣ | ಮಗ ಮೃತಪಟ್ಟಿರುವುದು ತಿಳಿಯದೆ 4 ದಿನ ಶವದೊಂದಿಗೆ ಕಳೆದ ಅಂಧ ದಂಪತಿ!
ಒಂದು ವೇಳೆ ಈ ಪಟಾಕಿ ಮಾರಾಟದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾಹುತವಾದರೆ ತಾಲೂಕು ಆಡಳಿತವೇ ಸಂಪೂರ್ಣ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ಹಾಸನ ಜಿಲಾಧ್ಯಕ್ಷ ಜೀವನ್ ಗೌಡ, ತಾಲೂಕು ಅಧ್ಯಕ್ಷ ವಿಜಯ್ ಕುಮಾರ್, ಉಪಾಧ್ಯಕ್ಷ ಪ್ರದೀಪ್ ಮಾವಿನಹಳ್ಳಿ, ಮಹೇಶ್, ಬಾಲರಾಜ್, ಸ್ಮಿಥನ್, ಮಂಜು, ಪ್ರದೀಪ್ ಇನ್ನಿತರರು ಉಪಸ್ಥಿತರಿದ್ದರು.
